ಸಿನಿಮಾದಲ್ಲಿ ನೋಡಿದ ಹಾಗೇ ರಿಯಲ್ ಲೈಫ್ನಲ್ಲಿ ಮಾಡಿದ್ರೆ ಇದೇ ಆಗೋದು.. ಕಳ್ಳರು ಚಾಪೆ ಕೆಳಗೆ ನುಗ್ಗಿದ್ರೆ ಪೊಲೀಸರು ರಂಗೋಲಿ ಕೆಳಗೆ ನುಗ್ಗುತ್ತಾರೆ ಅನ್ನೋದಕ್ಕೆ ಇದೇ ಪ್ರತ್ಯಕ್ಷ ಸಾಕ್ಷಿ. ಇಲ್ಲೊಬ್ಬ ಖತರ್ನಾಕ್ ಖೈದಿ 2011ರ ಫೆಬ್ರವರಿ 1ರಂದು ಕೇರಳದಲ್ಲಿ ಸಂಚಲನ ಸೃಷ್ಟಿಸಿದ್ದ ಯುವತಿ ರೇ*ಪ್ ಅಂಡ್ ಮ*ರ್ಡರ್ ಕೇಸ್ನಲ್ಲಿ ಗೋವಿಂದಚಾಮಿ ಅರೆಸ್ಟ್ ಆಗಿದ್ದ.
ಎರ್ನಾಕುಲಂನಿಂದ ಶೋರ್ನೂರಿಗೆ ಹೋಗುತ್ತಿದ್ದ ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 23 ವರ್ಷದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಹತ್ಯೆ ಮಾಡಿದ್ದ. ಈ ಪ್ರಕರಣದಲ್ಲಿ ಆರೋಪಿ ಗೋವಿಂದಚಾಮಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಕೇರಳದ ಕಣ್ಣೂರಿನ ಸೆಂಟ್ರಲ್ ಜೈಲಿನಿಂದ ನಿನ್ನೆ ಮಧ್ಯರಾತ್ರಿ 1 ಗಂಟೆ 20ಕ್ಕೆ ಗೋವಿಂದ ಚಾಮಿ ಎಸ್ಕೇಪ್ ಆಗಿದ್ದ.
ಕಣ್ಣೂರು ಕೇಂದ್ರ ಕಾರಾಗೃಹದಿಂದ 4 ಕಿ.ಮೀ ದೂರದಲ್ಲಿರುವ ಪಾಳುಬಿದ್ದ ಮನೆಯ ಬಳಿಯ ಬಾವಿಯಲ್ಲಿ ಅಡಗಿ ಕುಳಿತಿದ್ದ. ಜೈಲಿನಿಂದ ಎಸ್ಕೇಪ್ ವಿಚಾರ ತಿಳಿದ ಪೊಲೀಸರು ಡಾಗ್ ಸ್ಕ್ವಾಡ್, ಸುತ್ತ ಮುತ್ತಲಿನ ಸಿಸಿಟಿವಿ ದೃಶ್ಯ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು. ಇದಾದ ಬಳಿಕ ಬೆಳಗ್ಗೆ 10:30ರ ಸುಮಾರಿಗೆ ಬಾವಿಯಲ್ಲಿ ಅಡಗಿ ಕೂತಿದ್ದ ಗೋವಿಂದ ಚಾಮಿಯನ್ನು ಪತ್ತೆ ಹಚ್ಚಿದ ಪೊಲೀಸರು ಮತ್ತೆ ಲಾಕ್ ಮಾಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…