ಸಿನಿಮಾದಲ್ಲಿ ನೋಡಿದ ಹಾಗೇ ರಿಯಲ್ ಲೈಫ್ನಲ್ಲಿ ಮಾಡಿದ್ರೆ ಇದೇ ಆಗೋದು.. ಕಳ್ಳರು ಚಾಪೆ ಕೆಳಗೆ ನುಗ್ಗಿದ್ರೆ ಪೊಲೀಸರು ರಂಗೋಲಿ ಕೆಳಗೆ ನುಗ್ಗುತ್ತಾರೆ ಅನ್ನೋದಕ್ಕೆ ಇದೇ ಪ್ರತ್ಯಕ್ಷ ಸಾಕ್ಷಿ. ಇಲ್ಲೊಬ್ಬ ಖತರ್ನಾಕ್ ಖೈದಿ 2011ರ ಫೆಬ್ರವರಿ 1ರಂದು ಕೇರಳದಲ್ಲಿ ಸಂಚಲನ ಸೃಷ್ಟಿಸಿದ್ದ ಯುವತಿ ರೇ*ಪ್ ಅಂಡ್ ಮ*ರ್ಡರ್ ಕೇಸ್ನಲ್ಲಿ ಗೋವಿಂದಚಾಮಿ ಅರೆಸ್ಟ್ ಆಗಿದ್ದ.
ಎರ್ನಾಕುಲಂನಿಂದ ಶೋರ್ನೂರಿಗೆ ಹೋಗುತ್ತಿದ್ದ ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 23 ವರ್ಷದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಹತ್ಯೆ ಮಾಡಿದ್ದ. ಈ ಪ್ರಕರಣದಲ್ಲಿ ಆರೋಪಿ ಗೋವಿಂದಚಾಮಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಕೇರಳದ ಕಣ್ಣೂರಿನ ಸೆಂಟ್ರಲ್ ಜೈಲಿನಿಂದ ನಿನ್ನೆ ಮಧ್ಯರಾತ್ರಿ 1 ಗಂಟೆ 20ಕ್ಕೆ ಗೋವಿಂದ ಚಾಮಿ ಎಸ್ಕೇಪ್ ಆಗಿದ್ದ.
ಕಣ್ಣೂರು ಕೇಂದ್ರ ಕಾರಾಗೃಹದಿಂದ 4 ಕಿ.ಮೀ ದೂರದಲ್ಲಿರುವ ಪಾಳುಬಿದ್ದ ಮನೆಯ ಬಳಿಯ ಬಾವಿಯಲ್ಲಿ ಅಡಗಿ ಕುಳಿತಿದ್ದ. ಜೈಲಿನಿಂದ ಎಸ್ಕೇಪ್ ವಿಚಾರ ತಿಳಿದ ಪೊಲೀಸರು ಡಾಗ್ ಸ್ಕ್ವಾಡ್, ಸುತ್ತ ಮುತ್ತಲಿನ ಸಿಸಿಟಿವಿ ದೃಶ್ಯ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು. ಇದಾದ ಬಳಿಕ ಬೆಳಗ್ಗೆ 10:30ರ ಸುಮಾರಿಗೆ ಬಾವಿಯಲ್ಲಿ ಅಡಗಿ ಕೂತಿದ್ದ ಗೋವಿಂದ ಚಾಮಿಯನ್ನು ಪತ್ತೆ ಹಚ್ಚಿದ ಪೊಲೀಸರು ಮತ್ತೆ ಲಾಕ್ ಮಾಡಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…