ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರು ಅತ್ಯಂತ ಸಮರ್ಥವಾಗಿ 4,078 ದಿನಗಳ ಆಡಳಿತ ನಡೆಸಿದ್ದಾರೆ. ಅಂದರೆ, ಜವಾಹರಲಾಲ್ ನೆಹರೂ ಅವರ ನಂತರದಲ್ಲಿ ಅತಿ ಹೆಚ್ಚು ದಿನಗಳ ಕಾಲ ದೇಶವನ್ನು ಮುನ್ನಡೆಸುತ್ತಿರುವ ಎರಡನೇ ಪ್ರಧಾನಿ ಆಗಿ ಹೊರಹೊಮ್ಮಿದ್ದಾರೆ.
ಇದು ಹೊಸ ದಾಖಲೆ. ಇದಕ್ಕಾಗಿ ನಾಡಿನ, ದೇಶದ ಜನರ ಪರವಾಗಿ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿಜೀ ಅವರು ಸತತ 3ನೇ ಬಾರಿಗೆ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ದೇಶದ ಪ್ರಧಾನಮಂತ್ರಿಯಲ್ಲ.
ದೇಶ ಸೇವಕ ಎಂಬ ವಿಚಾರ ಇಟ್ಟುಕೊಂಡು ದೇಶವನ್ನು ಮುನ್ನಡೆಸುತ್ತಿದ್ದಾರೆ. ಮೋದಿಜೀ ಅವರು ತುರ್ತು ಪರಿಸ್ಥಿತಿ ಹೇರಿದವರಲ್ಲ. ಯಾವುದೇ ಒಂದು ಅನುಕಂಪದ ಆಧಾರದಲ್ಲಿ ಸತತವಾಗಿ ಈ ದೇಶದ ಆಡಳಿತ ನಡೆಸುತ್ತಿಲ್ಲ ಎಂದು ತಿಳಿಸಿದ್ದಾರೆ. ಅವರು ಪ್ರಾಮಾಣಿಕರಾಗಿ, ಪರಿಶ್ರಮದಿಂದ ಅಭಿವೃದ್ಧಿ ಮಾಡುವ ಮೂಲಕ 3ನೇ ಬಾರಿಗೆ ಪ್ರಧಾನಮಂತ್ರಿಗಳಾಗಿ ಸುದೀರ್ಘವಾಗಿ ದೇಶ ಮುನ್ನಡೆಸುತ್ತಿದ್ದಾರೆ. ಮುಂದೆಯೂ ಕೂಡ ಈ ದೇಶವನ್ನು ಸದೃಢವಾಗಿ ಮುನ್ನಡೆಸಲಿದ್ದಾರೆ ಎಂದು ಹೇಳಿದ್ರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…