ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರು ಅತ್ಯಂತ ಸಮರ್ಥವಾಗಿ 4,078 ದಿನಗಳ ಆಡಳಿತ ನಡೆಸಿದ್ದಾರೆ. ಅಂದರೆ, ಜವಾಹರಲಾಲ್ ನೆಹರೂ ಅವರ ನಂತರದಲ್ಲಿ ಅತಿ ಹೆಚ್ಚು ದಿನಗಳ ಕಾಲ ದೇಶವನ್ನು ಮುನ್ನಡೆಸುತ್ತಿರುವ ಎರಡನೇ ಪ್ರಧಾನಿ ಆಗಿ ಹೊರಹೊಮ್ಮಿದ್ದಾರೆ.
ಇದು ಹೊಸ ದಾಖಲೆ. ಇದಕ್ಕಾಗಿ ನಾಡಿನ, ದೇಶದ ಜನರ ಪರವಾಗಿ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿಜೀ ಅವರು ಸತತ 3ನೇ ಬಾರಿಗೆ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ದೇಶದ ಪ್ರಧಾನಮಂತ್ರಿಯಲ್ಲ.
ದೇಶ ಸೇವಕ ಎಂಬ ವಿಚಾರ ಇಟ್ಟುಕೊಂಡು ದೇಶವನ್ನು ಮುನ್ನಡೆಸುತ್ತಿದ್ದಾರೆ. ಮೋದಿಜೀ ಅವರು ತುರ್ತು ಪರಿಸ್ಥಿತಿ ಹೇರಿದವರಲ್ಲ. ಯಾವುದೇ ಒಂದು ಅನುಕಂಪದ ಆಧಾರದಲ್ಲಿ ಸತತವಾಗಿ ಈ ದೇಶದ ಆಡಳಿತ ನಡೆಸುತ್ತಿಲ್ಲ ಎಂದು ತಿಳಿಸಿದ್ದಾರೆ. ಅವರು ಪ್ರಾಮಾಣಿಕರಾಗಿ, ಪರಿಶ್ರಮದಿಂದ ಅಭಿವೃದ್ಧಿ ಮಾಡುವ ಮೂಲಕ 3ನೇ ಬಾರಿಗೆ ಪ್ರಧಾನಮಂತ್ರಿಗಳಾಗಿ ಸುದೀರ್ಘವಾಗಿ ದೇಶ ಮುನ್ನಡೆಸುತ್ತಿದ್ದಾರೆ. ಮುಂದೆಯೂ ಕೂಡ ಈ ದೇಶವನ್ನು ಸದೃಢವಾಗಿ ಮುನ್ನಡೆಸಲಿದ್ದಾರೆ ಎಂದು ಹೇಳಿದ್ರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…