ಕೇವಲ ಎರಡು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಯುವತಿಯೊಬ್ಬರು ಜೀವ ಕಳೆದುಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಮದಲ್ಲಿ ನಡೆದಿದೆ.
ಇದಕ್ಕೆ ಗಂಡನೇ ಕಾರಣ ಎಂದು ಯುವತಿ ಕಡೆಯವರು ಆರೋಪ ಮಾಡಿದ್ದಾರೆ. ತಾಲೂಕಿನ ಬಲ್ಲೇನಹಳ್ಳಿ ಗ್ರಾಮದ ಪೂಜಾ (25) ನೇಣು ಬಿಗಿದುಕೊಂಡ ಯುವತಿಯಾಗಿದ್ದಾರೆ. ಪೂಜಾ ಹಾಗೂ ಕೆನ್ನಾಳು ಗ್ರಾಮದ ಅಭಿನಂದನ್ ಪ್ರೀತಿಸಿ ಮನೆಯವರ ವಿರೋಧದ ನಡುವೆಯೂ ಮದುವೆಯಾಗಿದ್ದರು. ಎರಡು ತಿಂಗಳ ಹಿಂದಷ್ಟೇ ಈ ಇಬ್ಬರು ಮದುವೆಯಾಗಿದ್ದು ಆದರೆ ಮದುವೆ ಬಳಿಕ ಗಂಡನ ಮನೆಯವರಿಂದ ಕಿರುಕುಳ ಆರೋಪವನ್ನು ಯುವತಿ ಕಡೆಯವರು ಮಾಡಿದ್ದಾರೆ.
ಇದು ಅಲ್ಲದೇ ನಿನ್ನೆ ರಾತ್ರಿ ಜೀವ ತೆಗೆದು ಬಳಿಕ ನೇಣು ಬಿಗಿದಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಈ ಸಂಬಂಧ ಮೃತ ಪೂಜಾ ಸಂಬಂಧಿಕರಿಂದ ಪಾಂಡವಪುರದ ಪೊಲೀಸ್ ಠಾಣೆ ಮುಂಭಾಗ ಗದ್ದಲ ಏರ್ಪಟ್ಟಿತ್ತು. ಎಫ್ಐಆರ್ ದಾಖಲಿಸಲು ತಡ ಮಾಡ್ತಿರುವ ಪೋಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ತಕ್ಷಣ ದೂರು ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…