ಬಂಟ್ವಾಳ, ಜು. 26; ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ 27ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಭಂದಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಜು. 25ರಂದು ಬಂಧಿಸಿದ್ದಾರೆ.
ಪುದು ಗ್ರಾಮದ ರೊಟಿ ಗುಡ್ಡೆ ನಿವಾಸಿ ಸಚಿನ್ ಯಾನೆ ಸಚ್ಚು ರೊಟ್ಟಿಗುಡ್ಡೆ ಬಂಧಿತ ಆರೋಪಿಯಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆ ನಡೆಸಲು ನ್ಯಾಯಾಲಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸರು 10 ಮಂದಿ ಆರೋಪಿಯನ್ನು ಬಂಧಿಸಿದ್ದರು. ಜು. 21ರಂದು 11ನೇ ಆರೋಪಿ ಅಮ್ಮುಂಜೆ ಗ್ರಾಮದ ಶಾಹಿತ್ ಯಾನೆ ಸಾಹಿತ್ನನ್ನು ಬಂಧಿಸಿ ಕಸ್ಟಡಿಗೆ ಪಡೆದಿದ್ದರು. ಪ್ರಾರಂಭದಲ್ಲಿ ಬಂಧಿತ ಬಹುತೇಕ ಎಲ್ಲಾ ಆರೋಪಿಗಳನ್ನು ಪೊಲೀಸರು ಕೆಲ ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದು, ಪ್ರಸ್ತುತ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…