ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು: ಹೊಸ ಚಿಂತನೆಗಳನ್ನು ಅರಸುವ ಸಲುವಾಗಿ ಮಂಗಳೂರಿನ ಎಂ.ಸಿ.ಸಿ.ಬ್ಯಾಂಕ್ ಚಿಂತನಾ ಶೃಂಗ 2025

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಕ್ಷಿತಿಜಗಳನ್ನು ಅನ್ವೇಷಿಸುವ ಮತ್ತು ಮುಂದಿನ ಬೆಳವಣಿಗೆಗೆ ಹೊಸ ಚಿಂತನೆಗಳನ್ನು ಅರಸುವ ಸಲುವಾಗಿ ಮಂಗಳೂರಿನ ಎಂ.ಸಿ.ಸಿ.ಬ್ಯಾಂಕ್ ಚಿಂತನಾ ಶೃಂಗ 2025ನ್ನು ಆಯೋಜಿಸಿತ್ತು. ಅತ್ತಾವರದ ಹೊಟೇಲ್ ಅವತಾರ್ ನಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೋ ವಹಿಸಿದ್ದರು.

ಸಭೆಯಲ್ಲಿ ಎಂ.ಸಿ.ಸಿ. ಬ್ಯಾಂಕಿನ ಬೆಳವಣಿಗೆಯ ಮಾಹಿತಿಯನ್ನು ಪ್ರಸ್ತುತಪಡಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ ಅವರು ಬ್ಯಾಂಕ್ ಕಳೆದ ಒಂದು ಶತಮಾನದಲ್ಲಿ ಸಾಗಿ ಬಂದ ಪ್ರಯಾಣವನ್ನು ಉಲ್ಲೇಖಿಸಿದ್ರು. ಕಳೆದ ಏಳು ವರ್ಷಗಳಲ್ಲಿ ಸಾಧಿತವಾದ ತ್ವರಿತಗತಿಯ ಪ್ರಗತಿ ಮುಂದೆಯೂ ಮುಂದುವರಿಯಬೇಕು ಬ್ಯಾಂಕ್ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳ ಬೇಕು ಎಂದೂ ಅವರು ಸಲಹೆ ಮಾಡಿದ್ರು. ಮಂಗಳೂರು ಬಿಷಪ್ ರೆವೆರೆಂಡ್ ಡಾ. ಪೀಟರ್ ಪೌಲ್ ಸಲ್ದಾನ ಮಾತನಾಡಿ ಗುಣ ಮಟ್ಟದ ಮತ್ತು ನಗುಮೊಗದ ಸೇವೆ ಇದ್ದರೆ ಗ್ರಾಹಕರು ಹೆಚ್ಚುತ್ತಾರೆ ಎಂದ್ರು. ದಿಕ್ಸೂಚಿ ಭಾಷಣ ಮಾಡಿದ ಮೈಕೆಲ್ ಡಿಸೋಜಾ ಬ್ಯಾಂಕಿನ ದೀರ್ಘ ಕಾಲೀನ ಯೋಜನೆಗೆ ಇಂತಹ ಚಿಂತನ ಕಾರ್ಯಕ್ರಮಗಳು ಹೊಸ ನೋಟವನ್ನು ಒದಗಿಸುತ್ತವೆ ಎಂದರು. ಅಧ್ಯಕ್ಷ ಭಾಷಣ ಮಾಡಿದ ಸಹಕಾರ ರತ್ನ ಅನಿಲ್ ಲೋಬೋ ಬಂದಿರುವ ಸಲಹೆ ಸೂಚನೆಗಳು ಬಹಳ ಉಪಯುಕ್ತವಾದಂತಹವು ಎಂದು ಶ್ಲಾಘಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಮ್ಯಾಕ್ಸಿಂ ಫೆರ್ನಾಂಡೀಸ್, ಡಾ.ಅಲೋಶಿಯಸ್ ಸಿಕ್ವೇರಾ, ಎಲ್. ಅರ್ಹಾನ್ನ, ಅಲೆನ್ ಪಿರೇರಾ, ಫೌಸ್ಟಿನ್ ಲೋಬೋ, ಡಾ. ವಿನ್ಸೆಂಟ್ ಆಳ್ವಾ , ಪೀಯುಸ್ ರೋಡ್ರಿಗಸ್, ಅಲ್ವಿನ್ ಕ್ರಾಸ್ಟಾ, ಮತ್ತಿತರರು ಪಾಲ್ಗೊಂಡಿದ್ದರು.

 

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!