ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಹೊಸ ಚಿಂತನೆಗಳನ್ನು ಅರಸುವ ಸಲುವಾಗಿ ಮಂಗಳೂರಿನ ಎಂ.ಸಿ.ಸಿ.ಬ್ಯಾಂಕ್ ಚಿಂತನಾ ಶೃಂಗ 2025

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಕ್ಷಿತಿಜಗಳನ್ನು ಅನ್ವೇಷಿಸುವ ಮತ್ತು ಮುಂದಿನ ಬೆಳವಣಿಗೆಗೆ ಹೊಸ ಚಿಂತನೆಗಳನ್ನು ಅರಸುವ ಸಲುವಾಗಿ ಮಂಗಳೂರಿನ ಎಂ.ಸಿ.ಸಿ.ಬ್ಯಾಂಕ್ ಚಿಂತನಾ ಶೃಂಗ 2025ನ್ನು ಆಯೋಜಿಸಿತ್ತು. ಅತ್ತಾವರದ ಹೊಟೇಲ್ ಅವತಾರ್ ನಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೋ ವಹಿಸಿದ್ದರು.

ಸಭೆಯಲ್ಲಿ ಎಂ.ಸಿ.ಸಿ. ಬ್ಯಾಂಕಿನ ಬೆಳವಣಿಗೆಯ ಮಾಹಿತಿಯನ್ನು ಪ್ರಸ್ತುತಪಡಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ ಅವರು ಬ್ಯಾಂಕ್ ಕಳೆದ ಒಂದು ಶತಮಾನದಲ್ಲಿ ಸಾಗಿ ಬಂದ ಪ್ರಯಾಣವನ್ನು ಉಲ್ಲೇಖಿಸಿದ್ರು. ಕಳೆದ ಏಳು ವರ್ಷಗಳಲ್ಲಿ ಸಾಧಿತವಾದ ತ್ವರಿತಗತಿಯ ಪ್ರಗತಿ ಮುಂದೆಯೂ ಮುಂದುವರಿಯಬೇಕು ಬ್ಯಾಂಕ್ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳ ಬೇಕು ಎಂದೂ ಅವರು ಸಲಹೆ ಮಾಡಿದ್ರು. ಮಂಗಳೂರು ಬಿಷಪ್ ರೆವೆರೆಂಡ್ ಡಾ. ಪೀಟರ್ ಪೌಲ್ ಸಲ್ದಾನ ಮಾತನಾಡಿ ಗುಣ ಮಟ್ಟದ ಮತ್ತು ನಗುಮೊಗದ ಸೇವೆ ಇದ್ದರೆ ಗ್ರಾಹಕರು ಹೆಚ್ಚುತ್ತಾರೆ ಎಂದ್ರು. ದಿಕ್ಸೂಚಿ ಭಾಷಣ ಮಾಡಿದ ಮೈಕೆಲ್ ಡಿಸೋಜಾ ಬ್ಯಾಂಕಿನ ದೀರ್ಘ ಕಾಲೀನ ಯೋಜನೆಗೆ ಇಂತಹ ಚಿಂತನ ಕಾರ್ಯಕ್ರಮಗಳು ಹೊಸ ನೋಟವನ್ನು ಒದಗಿಸುತ್ತವೆ ಎಂದರು. ಅಧ್ಯಕ್ಷ ಭಾಷಣ ಮಾಡಿದ ಸಹಕಾರ ರತ್ನ ಅನಿಲ್ ಲೋಬೋ ಬಂದಿರುವ ಸಲಹೆ ಸೂಚನೆಗಳು ಬಹಳ ಉಪಯುಕ್ತವಾದಂತಹವು ಎಂದು ಶ್ಲಾಘಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಮ್ಯಾಕ್ಸಿಂ ಫೆರ್ನಾಂಡೀಸ್, ಡಾ.ಅಲೋಶಿಯಸ್ ಸಿಕ್ವೇರಾ, ಎಲ್. ಅರ್ಹಾನ್ನ, ಅಲೆನ್ ಪಿರೇರಾ, ಫೌಸ್ಟಿನ್ ಲೋಬೋ, ಡಾ. ವಿನ್ಸೆಂಟ್ ಆಳ್ವಾ , ಪೀಯುಸ್ ರೋಡ್ರಿಗಸ್, ಅಲ್ವಿನ್ ಕ್ರಾಸ್ಟಾ, ಮತ್ತಿತರರು ಪಾಲ್ಗೊಂಡಿದ್ದರು.

 

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!