ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಕ್ಷಿತಿಜಗಳನ್ನು ಅನ್ವೇಷಿಸುವ ಮತ್ತು ಮುಂದಿನ ಬೆಳವಣಿಗೆಗೆ ಹೊಸ ಚಿಂತನೆಗಳನ್ನು ಅರಸುವ ಸಲುವಾಗಿ ಮಂಗಳೂರಿನ ಎಂ.ಸಿ.ಸಿ.ಬ್ಯಾಂಕ್ ಚಿಂತನಾ ಶೃಂಗ 2025ನ್ನು ಆಯೋಜಿಸಿತ್ತು. ಅತ್ತಾವರದ ಹೊಟೇಲ್ ಅವತಾರ್ ನಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೋ ವಹಿಸಿದ್ದರು.
ಸಭೆಯಲ್ಲಿ ಎಂ.ಸಿ.ಸಿ. ಬ್ಯಾಂಕಿನ ಬೆಳವಣಿಗೆಯ ಮಾಹಿತಿಯನ್ನು ಪ್ರಸ್ತುತಪಡಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ ಅವರು ಬ್ಯಾಂಕ್ ಕಳೆದ ಒಂದು ಶತಮಾನದಲ್ಲಿ ಸಾಗಿ ಬಂದ ಪ್ರಯಾಣವನ್ನು ಉಲ್ಲೇಖಿಸಿದ್ರು. ಕಳೆದ ಏಳು ವರ್ಷಗಳಲ್ಲಿ ಸಾಧಿತವಾದ ತ್ವರಿತಗತಿಯ ಪ್ರಗತಿ ಮುಂದೆಯೂ ಮುಂದುವರಿಯಬೇಕು ಬ್ಯಾಂಕ್ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳ ಬೇಕು ಎಂದೂ ಅವರು ಸಲಹೆ ಮಾಡಿದ್ರು. ಮಂಗಳೂರು ಬಿಷಪ್ ರೆವೆರೆಂಡ್ ಡಾ. ಪೀಟರ್ ಪೌಲ್ ಸಲ್ದಾನ ಮಾತನಾಡಿ ಗುಣ ಮಟ್ಟದ ಮತ್ತು ನಗುಮೊಗದ ಸೇವೆ ಇದ್ದರೆ ಗ್ರಾಹಕರು ಹೆಚ್ಚುತ್ತಾರೆ ಎಂದ್ರು. ದಿಕ್ಸೂಚಿ ಭಾಷಣ ಮಾಡಿದ ಮೈಕೆಲ್ ಡಿಸೋಜಾ ಬ್ಯಾಂಕಿನ ದೀರ್ಘ ಕಾಲೀನ ಯೋಜನೆಗೆ ಇಂತಹ ಚಿಂತನ ಕಾರ್ಯಕ್ರಮಗಳು ಹೊಸ ನೋಟವನ್ನು ಒದಗಿಸುತ್ತವೆ ಎಂದರು. ಅಧ್ಯಕ್ಷ ಭಾಷಣ ಮಾಡಿದ ಸಹಕಾರ ರತ್ನ ಅನಿಲ್ ಲೋಬೋ ಬಂದಿರುವ ಸಲಹೆ ಸೂಚನೆಗಳು ಬಹಳ ಉಪಯುಕ್ತವಾದಂತಹವು ಎಂದು ಶ್ಲಾಘಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಮ್ಯಾಕ್ಸಿಂ ಫೆರ್ನಾಂಡೀಸ್, ಡಾ.ಅಲೋಶಿಯಸ್ ಸಿಕ್ವೇರಾ, ಎಲ್. ಅರ್ಹಾನ್ನ, ಅಲೆನ್ ಪಿರೇರಾ, ಫೌಸ್ಟಿನ್ ಲೋಬೋ, ಡಾ. ವಿನ್ಸೆಂಟ್ ಆಳ್ವಾ , ಪೀಯುಸ್ ರೋಡ್ರಿಗಸ್, ಅಲ್ವಿನ್ ಕ್ರಾಸ್ಟಾ, ಮತ್ತಿತರರು ಪಾಲ್ಗೊಂಡಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…