ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ದಾಟಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ ೭೫ ರ ಮಾಣಿ ಸಮೀಪದ ಬೊಲ್ಲುಕಲ್ಲು ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿರುವ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಮಗು ಸಹಿತ ನಾಲ್ವರು ಪ್ರಯಾಣಿಕರಿದ್ದರು ಎಂದು ಹೇಳಲಾಗಿದ್ದು, ಅದೃಷ್ಟವಶಾತ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆಯಾದರೂ ಯಾವುದೇ ಅಪಾಯವಾಗಿಲ್ಲ ಎಂದು ತಿಳಿಸಿದ್ದಾರೆ.
ರಸ್ತೆಯಲ್ಲಿ ನೀರುನಿಂತಿದ್ದು, ಇದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ, ಇದೇ ರೀತಿ ಇಲ್ಲಿ ಅನೇಕ ಅಪಘಾತಗಳು ನಡೆದಿದ್ದು, .ರಾಷ್ಟ್ರೀಯ ಹೆದ್ದಾರಿ ಯ ಅಲ್ಲಲ್ಲಿ ಇದೇ ರೀತಿ ನೀರು ತುಂಬಿದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡು ಅಪಘಾತಗಳು ನಡೆಯುತ್ತಿದೆ. ಕಾಂಕ್ರೀಟ್ ರಸ್ತೆಯಲ್ಲಿ ತುಂಬಿದ ನೀರು ಸರಿಯಾಗಿ ಹರದು ಹೋಗಲು ವ್ಯವಸ್ಥೆ ಮಾಡಬೇಕು ಎಂಬ ಒತ್ತಾಯಗಳು ಕೇಳಿ ಬಂದಿವೆ
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…