ಬಂಟ್ವಾಳ ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ವ್ಯಾಪಕ ಗಾಳಿ ಮಳೆಯಾಗುತ್ತಿದೆ. ತಾಲೂಕಿನ ವಿವಿಧೆಡೆ ಮನೆ ಹಾನಿ ಪ್ರಕರಣಗಳು ಸಂಭವಿಸಿದೆ. ನೇತ್ರಾವತಿ ನದಿಯಲ್ಲಿ ನೀರಿನ ಹರಿವು ತುಸು ಏರಿಕೆ ಕಂಡಿದ್ದು, ಸೋಮವಾರ ನದಿ ನೀರಿನ ಮಟ್ಟ 8.0 ಮೀಟರ್ ಗೆ ಏರಿಕೆಯಾಗಿದೆ. ನೀರಿನ ಮಟ್ಟ ನಿಧಾನವಾಗಿ ಏರಿಕೆಯಾಗುತ್ತಿದ್ದು, ನದಿ ತೀರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಣಿಹಳ್ಳದಿಂದ ವಾಮದಪದವು ತೆರಳುವ ರಸ್ತೆ ಬದಿಯ ಗುಡ್ಡ ಜರಿದು ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಇರ್ವತ್ತೂರು ಗ್ರಾಮದ ವಿಶ್ವನಾಥ ಕೋಂ ಜಿನ್ನಪ್ಪ ಪೂಜಾರಿ ರವರ ವಾಸ್ತವ್ಯದ ಮನೆಯ ಬಳಿ ಗುಡ್ಡ ಕುಸಿದಿದ್ದು ಯಾವುದೇ ಜೀವ ಹಾನಿಯಾಗಿಲ್ಲ. ಕರೋಪಾಡಿ ಗ್ರಾಮದ ಒಡಿಯೂರು ಅಂಗನವಾಡಿ ಕೇಂದ್ರದ ಕಾಂಪೌಂಡ್ ಗೆ ಮರ ಬಿದ್ದು ಕಾಂಪೌಂಡ್ ಹಾನಿಯಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…