ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥನದ ಹೆಬ್ಬಾಗಿಲಿನ ಬೀಗ ಮುರಿದು ಕಳ್ಳತನಗೈಯುಲು ನಡೆಸಿದ ಯತ್ನವು ಶುಕ್ರವಾರ ತಡರಾತ್ರಿ 3 ಗಂಟೆಗೆ ನಡೆದಿದೆ.
ಕಳ್ಳರ ಕೃತ್ಯಗಮನಿಸಿದ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು ತೋರಿಸಿ ಜೀವಬೆದರಿಕೆಯೊಡ್ಡಿ ಪಲಾಯನಗೈದಿದ್ದಾರೆ. ತಕ್ಷಣ ಕಾವಲುಗಾರ ಸ್ಥಳೀಯ ಭಕ್ತರಿಗೆ ತಿಳಿಸಿದ್ದು, ತಕ್ಷಣ ದೇವಸ್ಥಾನದ ವಠಾರದಲ್ಲಿ ಸ್ಥಳೀಯರು ಒಟ್ಟಾಗಿದ್ದಾರೆ. ಸಿಸಿ ಟಿವಿ ಪರಿಶೀಲಿಸಿದಾಗ ಇಬ್ಬರು ಕಳ್ಳರು ಬಂದಿರುವುದು, ಪಲಾಯನದ ಹಾದಿ ತಿಳಿದುಬಂದಿದೆ. ತಕ್ಷಣ ಸ್ಥಳೀಯರು ಹುಡುಕಾಟ ನಡೆಸಿ ಕಡಿಯಾಳಿ ಪೆಟ್ರೋಲ್ ಬಂಕ್ ಬಳಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕಳ್ಳರು ಓಡುತ್ತ ಸಾಗುವಾಗ ಒರ್ವ ಕಳ್ಳನಿಗೆ ಮೂರ್ಛೆ ಬಂದು ಧರೆಗುಳಿದಿದ್ದಾನೆ. ಮೂರ್ಛೆಹೋಗಿರುವ ಕಳ್ಳನ ಉಪಚರಿಸುತ್ತಿದ್ದ ಮತ್ತೊಬ್ಬ ಕಳ್ಳನು, ಓಡಲು ಯತ್ನಿಸಿದರೂ ಸಿಗುವಂತಾಯಿತು. ಮೂರ್ಛೆ ವ್ಯಾಧಿ ಉಲ್ಭಣಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಳ್ಳನಿಗೆ, ಸ್ಥಳೀಯರು ಕಳ್ಳತನಕ್ಕೆ ತಂದಿರುವ ಕಬ್ಬಿಣದ ಸಲಕರಣೆಗಳನ್ನು ಕೈಗೆ ನೀಡಿ ಕಳ್ಳನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಕರೆಯ ಮೇರೆಗೆ ಸ್ಥಳಕ್ಕೆ ಬಂದಿರುವ ಸಮಾಜಸೇವಕ ನಿತ್ಯಾನಂದ ಒಳಕಾಡುವರು ಸ್ಥಳೀಯರ ಸಹಕಾರದಿಂದ ಮೂರ್ಛೆಹೋಗಿರುವ ಕಳ್ಳನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ. ಮತ್ತೊಬ್ಬ ಕಳ್ಳನನ್ನು ಸ್ಥಳೀಯರು ಪೋಲಿಸರಿಗೆ ಒಪ್ಪಿಸಿದ್ದಾರೆ. ಕಳ್ಳರು ಕೇರಳ ಮೂಲದವರೆಂದು ತಿಳಿದುಬಂದಿದೆ. ಹೆಚ್ಚಿನ ವಿವರಗಳು ಮತ್ತಷ್ಟೇ ತಿಳಿದುಬರಬೇಕಾಗಿದೆ. ದುಷ್ಕೃತ್ಯ ಎಸಗಲು ಬಂದಿರುವ ಕಳ್ಳನಿಗೆ ಕಡಿಯಾಳಿ ಮಹಿಷಮರ್ಧಿನಿ ದೇವಿಯೇ ಮೂರ್ಛೆ ಭರಿಸಿದ್ದಾಳೆ ಎಂದು ಭಕ್ತರು ಆಡಿಕೊಳ್ಳುತ್ತಿದ್ದಾರೆ. ದೇವಸ್ಥಾನದ ಕಾವಲುಗಾರನ ಕರ್ತವ್ಯ ಪ್ರಜ್ಞೆಗೂ ಶ್ಲಾಘನೆ ವ್ಯಕ್ತವಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…