ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥನದ ಹೆಬ್ಬಾಗಿಲಿನ ಬೀಗ ಮುರಿದು ಕಳ್ಳತನಗೈಯುಲು ನಡೆಸಿದ ಯತ್ನವು ಶುಕ್ರವಾರ ತಡರಾತ್ರಿ 3 ಗಂಟೆಗೆ ನಡೆದಿದೆ.
ಕಳ್ಳರ ಕೃತ್ಯಗಮನಿಸಿದ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು ತೋರಿಸಿ ಜೀವಬೆದರಿಕೆಯೊಡ್ಡಿ ಪಲಾಯನಗೈದಿದ್ದಾರೆ. ತಕ್ಷಣ ಕಾವಲುಗಾರ ಸ್ಥಳೀಯ ಭಕ್ತರಿಗೆ ತಿಳಿಸಿದ್ದು, ತಕ್ಷಣ ದೇವಸ್ಥಾನದ ವಠಾರದಲ್ಲಿ ಸ್ಥಳೀಯರು ಒಟ್ಟಾಗಿದ್ದಾರೆ. ಸಿಸಿ ಟಿವಿ ಪರಿಶೀಲಿಸಿದಾಗ ಇಬ್ಬರು ಕಳ್ಳರು ಬಂದಿರುವುದು, ಪಲಾಯನದ ಹಾದಿ ತಿಳಿದುಬಂದಿದೆ. ತಕ್ಷಣ ಸ್ಥಳೀಯರು ಹುಡುಕಾಟ ನಡೆಸಿ ಕಡಿಯಾಳಿ ಪೆಟ್ರೋಲ್ ಬಂಕ್ ಬಳಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕಳ್ಳರು ಓಡುತ್ತ ಸಾಗುವಾಗ ಒರ್ವ ಕಳ್ಳನಿಗೆ ಮೂರ್ಛೆ ಬಂದು ಧರೆಗುಳಿದಿದ್ದಾನೆ. ಮೂರ್ಛೆಹೋಗಿರುವ ಕಳ್ಳನ ಉಪಚರಿಸುತ್ತಿದ್ದ ಮತ್ತೊಬ್ಬ ಕಳ್ಳನು, ಓಡಲು ಯತ್ನಿಸಿದರೂ ಸಿಗುವಂತಾಯಿತು. ಮೂರ್ಛೆ ವ್ಯಾಧಿ ಉಲ್ಭಣಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಳ್ಳನಿಗೆ, ಸ್ಥಳೀಯರು ಕಳ್ಳತನಕ್ಕೆ ತಂದಿರುವ ಕಬ್ಬಿಣದ ಸಲಕರಣೆಗಳನ್ನು ಕೈಗೆ ನೀಡಿ ಕಳ್ಳನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಕರೆಯ ಮೇರೆಗೆ ಸ್ಥಳಕ್ಕೆ ಬಂದಿರುವ ಸಮಾಜಸೇವಕ ನಿತ್ಯಾನಂದ ಒಳಕಾಡುವರು ಸ್ಥಳೀಯರ ಸಹಕಾರದಿಂದ ಮೂರ್ಛೆಹೋಗಿರುವ ಕಳ್ಳನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ. ಮತ್ತೊಬ್ಬ ಕಳ್ಳನನ್ನು ಸ್ಥಳೀಯರು ಪೋಲಿಸರಿಗೆ ಒಪ್ಪಿಸಿದ್ದಾರೆ. ಕಳ್ಳರು ಕೇರಳ ಮೂಲದವರೆಂದು ತಿಳಿದುಬಂದಿದೆ. ಹೆಚ್ಚಿನ ವಿವರಗಳು ಮತ್ತಷ್ಟೇ ತಿಳಿದುಬರಬೇಕಾಗಿದೆ. ದುಷ್ಕೃತ್ಯ ಎಸಗಲು ಬಂದಿರುವ ಕಳ್ಳನಿಗೆ ಕಡಿಯಾಳಿ ಮಹಿಷಮರ್ಧಿನಿ ದೇವಿಯೇ ಮೂರ್ಛೆ ಭರಿಸಿದ್ದಾಳೆ ಎಂದು ಭಕ್ತರು ಆಡಿಕೊಳ್ಳುತ್ತಿದ್ದಾರೆ. ದೇವಸ್ಥಾನದ ಕಾವಲುಗಾರನ ಕರ್ತವ್ಯ ಪ್ರಜ್ಞೆಗೂ ಶ್ಲಾಘನೆ ವ್ಯಕ್ತವಾಗಿದೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…