ಡಾ.ಕನ್ಯಾನ ಸದಾಶಿವ ಶೆಟ್ಟಿ ಭಗೀರಥ ಪರಿಶ್ರಮದಿಂದ ಉತ್ತುಂಗವೇರಿದವರು. ತನ್ನ ದುಡಿಮೆಯ ಒಂದAಶವನ್ನು ಸಮಾಜಕ್ಕೆ ಅರ್ಪಿಸಬೇಕು, ಆ ನಿಟ್ಟಿನಲ್ಲಿ ಸಮಾಜದಲ್ಲಿರುವ ಅಶಕ್ತರ ಪಾಲಿಗೆ ಬೆಳಕಾಗಬೇಕೆಂದು ಕಷ್ಟಕ್ಕೆ ಸ್ಪಂದಿಸುತ್ತಾ ಬಂದಿರುವ ಕನ್ಯಾನ ಡಾ.ಸದಾಶಿವ ಶೆಟ್ಟಿಯವರ ಕನಸಿನ ಕೂಸಾದ ಉಚಿತ ಆರೋಗ್ಯ ವಿಮೆ ಮತ್ತು ಅಪಘಾತ ವಿಮೆಯ ಯೋಜನೆಯು ಈಗಾಗಲೇ ಕೈಗೂಡಿದೆ.
ಇದರ ಅಪಘಾತ ವಿಮಾ ಪಾಲಿಸಿ ವಿತರಣೆ ಚಿಗುರುಪಾದೆಯಲ್ಲಿರುವ ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗದ ಕೇಂದ್ರ ಸಮಿತಿಯ ಕಚೇರಿಯಲ್ಲಿ ನಡೆದಿದೆ. ಕನ್ಯಾನ ಡಾ.ಸದಾಶಿವ ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಈ ಯೋಜನೆಯ ವಿಮಾ ಪಾಲಿಸಿಯನ್ನು ಡಾ.ಸದಾಶಿವ ಶೆಟ್ಟಿಯವರು ಫಲಾನುಭವಿಗಳಿಗೆ ವಿತರಿಸಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಪೋಸ್ಟಲ್ ಪೇಮೆಂಟ್ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಮಾನಸ್ ಜಾರ್ಜ್, ಡಾ.ಕೆ. ಸದಾಶಿವ ಶೆಟ್ಟಿ ಅವರ ಸಹೋದರ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗದ ಉಪಾಧ್ಯಕ್ಷರಾದ ನಾರಾಯಣ ನೈಕ್ ನಡುಹಿತ್ಲು, ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ, ಕೋಶಾಧಿಕಾರಿ ಕಾರ್ತಿಕ್ ಶೆಟ್ಟಿ ಮಜಿಬೈಲ್ ಸೇರಿದಂತೆ ಹಲವರು ಭಾಗಿಯಾಗಿದ್ರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…