ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಜ್ಞಾನಿಗಳ ಗೌರವ ದೇವರಿಗೆ ಸಲ್ಲುತ್ತದೆ; ಕೃಷ್ಣಾಪುರಶ್ರೀ

ಉಡುಪಿ: ಜ್ಞಾನಿಗಳಿಗೆ ಪರಮಾತ್ಮ, ಪರಮಾತ್ಮನಿಗೆ ಜ್ಞಾನಿಗಳು ಪ್ರಿಯರಾಗಿದ್ದು ಜ್ಞಾನಿಗಳ ಗೌರವ ದೇವರಿಗೂ ಸಲ್ಲುತ್ತದೆ ಎಂದು ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಹೇಳಿದರು.
ಅವರು ಬೆಂಗಳೂರಿನ ಅಗ್ರಹಾರ ನಾರಾಯಣ ತಂತ್ರಿ ಟ್ರಸ್ಟ್ ವತಿಯಿಂದ ಉಡುಪಿ ರಥಬೀದಿಯ ಶ್ರೀಕೃಷ್ಣ ಸಭಾ ಮಂದಿರದಲ್ಲಿ ಆಯೋಜಿಸಿದ ಅಗ್ರಹಾರ ನಾರಾಯಣ ತಂತ್ರಿಗಳ ಸುವರ್ಣ ಸಂಸ್ಮರಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.


ನಿಯಮದಲ್ಲಿ ಬದುಕಿದ ಧರ್ಮಿಷ್ಠರಿಗೆ ಆಯ್ಕೆಗಳು ಕಡಿಮೆ, ಆದರೆ ಅಧರ್ಮಿಷ್ಠರಿಗೆ ಆಯ್ಕೆಗಳು ಬಹಳವಿರುತ್ತವೆ. ಆಚಾರ್ಯ ಎನಿಸಿಕೊಂಡವರು ಆಚಾರವಂತರಾಗಿರಬೇಕು. ಮಧ್ವ ಶಾಸ್ತ್ರ, ಗ್ರಂಥಗಳ ಅನುವಾದಕ್ಕೆ ತಮ್ಮ ಬದುಕು ಮೀಸಲಿಟ್ಟ ಅಗ್ರಹಾರ ನಾರಾಯಣ ತಂತ್ರಿಗಳು ಸಂಸ್ಥೆಯೊಂದು ಮಾಡಬೇಕಾದ ಕೆಲಸವನ್ನು ಏಕಾಂಗಿಯಾಗಿ ಮಾಡಿದ್ದಾರೆ ಎಂದರು.
ಎ.ರಘುಪತಿ ತಂತ್ರಿ ರಚಿತ ಭಾಗವತ ಸಾರ ಹಾಗೂ ಜ್ಞಾನ ಮತ್ತು ಭಕ್ತಿ ಯೋಗ ಕೃತಿಯನ್ನು ಈ ಸಂದರ್ಭ ಬಿಡುಗಡೆ ಮಾಡಲಾಯಿತು.
ಬೆಂಗಳೂರು ಪೂರ್ಣಪ್ರಜ್ಞ ಸಂಶೋಧನಾಲಯದ ನಿವೃತ್ತ ನಿರ್ದೇಶಕ ಡಾ. ಎ.ವಿ. ನಾಗತೀರ್ಥಾಚಾರ್ಯ ನಾಗಸಂಪಿಗೆ, ಬೆಂಗಳೂರಿನ ವಿದ್ವಾಂಸ ರಾಮವಿಠಲಾಚಾರ್ಯ, ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಿನ್ಸಿಪಾಲ್ ವಿದ್ವಾನ್ ಡಾ. ಎಚ್. ಸತ್ಯನಾರಾಯಣಾಚಾರ್ಯ, ಬೆಂಗಳೂರು ಸಂಸ್ಕೃತ ಕಾಲೇಜು ಉಪನ್ಯಾಸಕ ವಿದ್ವಾನ್ ಡಾ. ಕೆ. ರಾಜಗೋಪಾಲಾಚಾರ್ಯ ಸನ್ಮಾನ ಸ್ವೀಕರಿಸಿದರು.
ಪ್ರಹ್ಲಾದ ಬಾಯರಿ, ನಿರಂಜನ ಆಚಾರ್ಯ, ನಾಗರಾಜ ತಂತ್ರಿ, ವಿಷ್ಣುಮೂರ್ತಿ ತಂತ್ರಿ ಸನ್ಮಾನಿತರನ್ನು ಪರಿಚಯಿಸಿದರು. ವೀಣಾ ತಂತ್ರಿ ಅಗ್ರಹಾರ ನಾರಾಯಣ ತಂತ್ರಿ ಟ್ರಸ್ಟ್ ಮೂಲಕ ನಿರಂತರ ಕೆಲಸದ ಭರವಸೆಯಿತ್ತರು. ಸಂಸ್ಕೃತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.
ಪೂರ್ಣಪ್ರಜ್ಞ ತಂತ್ರಿ ವೇದಘೋಷ ಮಾಡಿದರು. ಬಾಲರಾಜ್ ತಂತ್ರಿ ಸ್ವಾಗತಿಸಿದರು. ಹೆರ್ಗ ಹರಿಪ್ರಸಾದ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಅಗ್ರಹಾರ ರಘುಪತಿ ತಂತ್ರಿ ಪ್ರಾಸ್ತಾವಿಕ ಮಾತನಾಡಿದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!