ಜನ ಮನದ ನಾಡಿ ಮಿಡಿತ

Advertisement

ಜ್ಞಾನಿಗಳ ಗೌರವ ದೇವರಿಗೆ ಸಲ್ಲುತ್ತದೆ; ಕೃಷ್ಣಾಪುರಶ್ರೀ

ಉಡುಪಿ: ಜ್ಞಾನಿಗಳಿಗೆ ಪರಮಾತ್ಮ, ಪರಮಾತ್ಮನಿಗೆ ಜ್ಞಾನಿಗಳು ಪ್ರಿಯರಾಗಿದ್ದು ಜ್ಞಾನಿಗಳ ಗೌರವ ದೇವರಿಗೂ ಸಲ್ಲುತ್ತದೆ ಎಂದು ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಹೇಳಿದರು.
ಅವರು ಬೆಂಗಳೂರಿನ ಅಗ್ರಹಾರ ನಾರಾಯಣ ತಂತ್ರಿ ಟ್ರಸ್ಟ್ ವತಿಯಿಂದ ಉಡುಪಿ ರಥಬೀದಿಯ ಶ್ರೀಕೃಷ್ಣ ಸಭಾ ಮಂದಿರದಲ್ಲಿ ಆಯೋಜಿಸಿದ ಅಗ್ರಹಾರ ನಾರಾಯಣ ತಂತ್ರಿಗಳ ಸುವರ್ಣ ಸಂಸ್ಮರಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.


ನಿಯಮದಲ್ಲಿ ಬದುಕಿದ ಧರ್ಮಿಷ್ಠರಿಗೆ ಆಯ್ಕೆಗಳು ಕಡಿಮೆ, ಆದರೆ ಅಧರ್ಮಿಷ್ಠರಿಗೆ ಆಯ್ಕೆಗಳು ಬಹಳವಿರುತ್ತವೆ. ಆಚಾರ್ಯ ಎನಿಸಿಕೊಂಡವರು ಆಚಾರವಂತರಾಗಿರಬೇಕು. ಮಧ್ವ ಶಾಸ್ತ್ರ, ಗ್ರಂಥಗಳ ಅನುವಾದಕ್ಕೆ ತಮ್ಮ ಬದುಕು ಮೀಸಲಿಟ್ಟ ಅಗ್ರಹಾರ ನಾರಾಯಣ ತಂತ್ರಿಗಳು ಸಂಸ್ಥೆಯೊಂದು ಮಾಡಬೇಕಾದ ಕೆಲಸವನ್ನು ಏಕಾಂಗಿಯಾಗಿ ಮಾಡಿದ್ದಾರೆ ಎಂದರು.
ಎ.ರಘುಪತಿ ತಂತ್ರಿ ರಚಿತ ಭಾಗವತ ಸಾರ ಹಾಗೂ ಜ್ಞಾನ ಮತ್ತು ಭಕ್ತಿ ಯೋಗ ಕೃತಿಯನ್ನು ಈ ಸಂದರ್ಭ ಬಿಡುಗಡೆ ಮಾಡಲಾಯಿತು.
ಬೆಂಗಳೂರು ಪೂರ್ಣಪ್ರಜ್ಞ ಸಂಶೋಧನಾಲಯದ ನಿವೃತ್ತ ನಿರ್ದೇಶಕ ಡಾ. ಎ.ವಿ. ನಾಗತೀರ್ಥಾಚಾರ್ಯ ನಾಗಸಂಪಿಗೆ, ಬೆಂಗಳೂರಿನ ವಿದ್ವಾಂಸ ರಾಮವಿಠಲಾಚಾರ್ಯ, ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಿನ್ಸಿಪಾಲ್ ವಿದ್ವಾನ್ ಡಾ. ಎಚ್. ಸತ್ಯನಾರಾಯಣಾಚಾರ್ಯ, ಬೆಂಗಳೂರು ಸಂಸ್ಕೃತ ಕಾಲೇಜು ಉಪನ್ಯಾಸಕ ವಿದ್ವಾನ್ ಡಾ. ಕೆ. ರಾಜಗೋಪಾಲಾಚಾರ್ಯ ಸನ್ಮಾನ ಸ್ವೀಕರಿಸಿದರು.
ಪ್ರಹ್ಲಾದ ಬಾಯರಿ, ನಿರಂಜನ ಆಚಾರ್ಯ, ನಾಗರಾಜ ತಂತ್ರಿ, ವಿಷ್ಣುಮೂರ್ತಿ ತಂತ್ರಿ ಸನ್ಮಾನಿತರನ್ನು ಪರಿಚಯಿಸಿದರು. ವೀಣಾ ತಂತ್ರಿ ಅಗ್ರಹಾರ ನಾರಾಯಣ ತಂತ್ರಿ ಟ್ರಸ್ಟ್ ಮೂಲಕ ನಿರಂತರ ಕೆಲಸದ ಭರವಸೆಯಿತ್ತರು. ಸಂಸ್ಕೃತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.
ಪೂರ್ಣಪ್ರಜ್ಞ ತಂತ್ರಿ ವೇದಘೋಷ ಮಾಡಿದರು. ಬಾಲರಾಜ್ ತಂತ್ರಿ ಸ್ವಾಗತಿಸಿದರು. ಹೆರ್ಗ ಹರಿಪ್ರಸಾದ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಅಗ್ರಹಾರ ರಘುಪತಿ ತಂತ್ರಿ ಪ್ರಾಸ್ತಾವಿಕ ಮಾತನಾಡಿದರು.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!