ಉಡುಪಿ: ಜ್ಞಾನಿಗಳಿಗೆ ಪರಮಾತ್ಮ, ಪರಮಾತ್ಮನಿಗೆ ಜ್ಞಾನಿಗಳು ಪ್ರಿಯರಾಗಿದ್ದು ಜ್ಞಾನಿಗಳ ಗೌರವ ದೇವರಿಗೂ ಸಲ್ಲುತ್ತದೆ ಎಂದು ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಹೇಳಿದರು.
ಅವರು ಬೆಂಗಳೂರಿನ ಅಗ್ರಹಾರ ನಾರಾಯಣ ತಂತ್ರಿ ಟ್ರಸ್ಟ್ ವತಿಯಿಂದ ಉಡುಪಿ ರಥಬೀದಿಯ ಶ್ರೀಕೃಷ್ಣ ಸಭಾ ಮಂದಿರದಲ್ಲಿ ಆಯೋಜಿಸಿದ ಅಗ್ರಹಾರ ನಾರಾಯಣ ತಂತ್ರಿಗಳ ಸುವರ್ಣ ಸಂಸ್ಮರಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ನಿಯಮದಲ್ಲಿ ಬದುಕಿದ ಧರ್ಮಿಷ್ಠರಿಗೆ ಆಯ್ಕೆಗಳು ಕಡಿಮೆ, ಆದರೆ ಅಧರ್ಮಿಷ್ಠರಿಗೆ ಆಯ್ಕೆಗಳು ಬಹಳವಿರುತ್ತವೆ. ಆಚಾರ್ಯ ಎನಿಸಿಕೊಂಡವರು ಆಚಾರವಂತರಾಗಿರಬೇಕು. ಮಧ್ವ ಶಾಸ್ತ್ರ, ಗ್ರಂಥಗಳ ಅನುವಾದಕ್ಕೆ ತಮ್ಮ ಬದುಕು ಮೀಸಲಿಟ್ಟ ಅಗ್ರಹಾರ ನಾರಾಯಣ ತಂತ್ರಿಗಳು ಸಂಸ್ಥೆಯೊಂದು ಮಾಡಬೇಕಾದ ಕೆಲಸವನ್ನು ಏಕಾಂಗಿಯಾಗಿ ಮಾಡಿದ್ದಾರೆ ಎಂದರು.
ಎ.ರಘುಪತಿ ತಂತ್ರಿ ರಚಿತ ಭಾಗವತ ಸಾರ ಹಾಗೂ ಜ್ಞಾನ ಮತ್ತು ಭಕ್ತಿ ಯೋಗ ಕೃತಿಯನ್ನು ಈ ಸಂದರ್ಭ ಬಿಡುಗಡೆ ಮಾಡಲಾಯಿತು.
ಬೆಂಗಳೂರು ಪೂರ್ಣಪ್ರಜ್ಞ ಸಂಶೋಧನಾಲಯದ ನಿವೃತ್ತ ನಿರ್ದೇಶಕ ಡಾ. ಎ.ವಿ. ನಾಗತೀರ್ಥಾಚಾರ್ಯ ನಾಗಸಂಪಿಗೆ, ಬೆಂಗಳೂರಿನ ವಿದ್ವಾಂಸ ರಾಮವಿಠಲಾಚಾರ್ಯ, ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಿನ್ಸಿಪಾಲ್ ವಿದ್ವಾನ್ ಡಾ. ಎಚ್. ಸತ್ಯನಾರಾಯಣಾಚಾರ್ಯ, ಬೆಂಗಳೂರು ಸಂಸ್ಕೃತ ಕಾಲೇಜು ಉಪನ್ಯಾಸಕ ವಿದ್ವಾನ್ ಡಾ. ಕೆ. ರಾಜಗೋಪಾಲಾಚಾರ್ಯ ಸನ್ಮಾನ ಸ್ವೀಕರಿಸಿದರು.
ಪ್ರಹ್ಲಾದ ಬಾಯರಿ, ನಿರಂಜನ ಆಚಾರ್ಯ, ನಾಗರಾಜ ತಂತ್ರಿ, ವಿಷ್ಣುಮೂರ್ತಿ ತಂತ್ರಿ ಸನ್ಮಾನಿತರನ್ನು ಪರಿಚಯಿಸಿದರು. ವೀಣಾ ತಂತ್ರಿ ಅಗ್ರಹಾರ ನಾರಾಯಣ ತಂತ್ರಿ ಟ್ರಸ್ಟ್ ಮೂಲಕ ನಿರಂತರ ಕೆಲಸದ ಭರವಸೆಯಿತ್ತರು. ಸಂಸ್ಕೃತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.
ಪೂರ್ಣಪ್ರಜ್ಞ ತಂತ್ರಿ ವೇದಘೋಷ ಮಾಡಿದರು. ಬಾಲರಾಜ್ ತಂತ್ರಿ ಸ್ವಾಗತಿಸಿದರು. ಹೆರ್ಗ ಹರಿಪ್ರಸಾದ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಅಗ್ರಹಾರ ರಘುಪತಿ ತಂತ್ರಿ ಪ್ರಾಸ್ತಾವಿಕ ಮಾತನಾಡಿದರು.
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…