ಉಡುಪಿ: ಜ್ಞಾನಿಗಳಿಗೆ ಪರಮಾತ್ಮ, ಪರಮಾತ್ಮನಿಗೆ ಜ್ಞಾನಿಗಳು ಪ್ರಿಯರಾಗಿದ್ದು ಜ್ಞಾನಿಗಳ ಗೌರವ ದೇವರಿಗೂ ಸಲ್ಲುತ್ತದೆ ಎಂದು ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಹೇಳಿದರು.
ಅವರು ಬೆಂಗಳೂರಿನ ಅಗ್ರಹಾರ ನಾರಾಯಣ ತಂತ್ರಿ ಟ್ರಸ್ಟ್ ವತಿಯಿಂದ ಉಡುಪಿ ರಥಬೀದಿಯ ಶ್ರೀಕೃಷ್ಣ ಸಭಾ ಮಂದಿರದಲ್ಲಿ ಆಯೋಜಿಸಿದ ಅಗ್ರಹಾರ ನಾರಾಯಣ ತಂತ್ರಿಗಳ ಸುವರ್ಣ ಸಂಸ್ಮರಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ನಿಯಮದಲ್ಲಿ ಬದುಕಿದ ಧರ್ಮಿಷ್ಠರಿಗೆ ಆಯ್ಕೆಗಳು ಕಡಿಮೆ, ಆದರೆ ಅಧರ್ಮಿಷ್ಠರಿಗೆ ಆಯ್ಕೆಗಳು ಬಹಳವಿರುತ್ತವೆ. ಆಚಾರ್ಯ ಎನಿಸಿಕೊಂಡವರು ಆಚಾರವಂತರಾಗಿರಬೇಕು. ಮಧ್ವ ಶಾಸ್ತ್ರ, ಗ್ರಂಥಗಳ ಅನುವಾದಕ್ಕೆ ತಮ್ಮ ಬದುಕು ಮೀಸಲಿಟ್ಟ ಅಗ್ರಹಾರ ನಾರಾಯಣ ತಂತ್ರಿಗಳು ಸಂಸ್ಥೆಯೊಂದು ಮಾಡಬೇಕಾದ ಕೆಲಸವನ್ನು ಏಕಾಂಗಿಯಾಗಿ ಮಾಡಿದ್ದಾರೆ ಎಂದರು.
ಎ.ರಘುಪತಿ ತಂತ್ರಿ ರಚಿತ ಭಾಗವತ ಸಾರ ಹಾಗೂ ಜ್ಞಾನ ಮತ್ತು ಭಕ್ತಿ ಯೋಗ ಕೃತಿಯನ್ನು ಈ ಸಂದರ್ಭ ಬಿಡುಗಡೆ ಮಾಡಲಾಯಿತು.
ಬೆಂಗಳೂರು ಪೂರ್ಣಪ್ರಜ್ಞ ಸಂಶೋಧನಾಲಯದ ನಿವೃತ್ತ ನಿರ್ದೇಶಕ ಡಾ. ಎ.ವಿ. ನಾಗತೀರ್ಥಾಚಾರ್ಯ ನಾಗಸಂಪಿಗೆ, ಬೆಂಗಳೂರಿನ ವಿದ್ವಾಂಸ ರಾಮವಿಠಲಾಚಾರ್ಯ, ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಿನ್ಸಿಪಾಲ್ ವಿದ್ವಾನ್ ಡಾ. ಎಚ್. ಸತ್ಯನಾರಾಯಣಾಚಾರ್ಯ, ಬೆಂಗಳೂರು ಸಂಸ್ಕೃತ ಕಾಲೇಜು ಉಪನ್ಯಾಸಕ ವಿದ್ವಾನ್ ಡಾ. ಕೆ. ರಾಜಗೋಪಾಲಾಚಾರ್ಯ ಸನ್ಮಾನ ಸ್ವೀಕರಿಸಿದರು.
ಪ್ರಹ್ಲಾದ ಬಾಯರಿ, ನಿರಂಜನ ಆಚಾರ್ಯ, ನಾಗರಾಜ ತಂತ್ರಿ, ವಿಷ್ಣುಮೂರ್ತಿ ತಂತ್ರಿ ಸನ್ಮಾನಿತರನ್ನು ಪರಿಚಯಿಸಿದರು. ವೀಣಾ ತಂತ್ರಿ ಅಗ್ರಹಾರ ನಾರಾಯಣ ತಂತ್ರಿ ಟ್ರಸ್ಟ್ ಮೂಲಕ ನಿರಂತರ ಕೆಲಸದ ಭರವಸೆಯಿತ್ತರು. ಸಂಸ್ಕೃತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.
ಪೂರ್ಣಪ್ರಜ್ಞ ತಂತ್ರಿ ವೇದಘೋಷ ಮಾಡಿದರು. ಬಾಲರಾಜ್ ತಂತ್ರಿ ಸ್ವಾಗತಿಸಿದರು. ಹೆರ್ಗ ಹರಿಪ್ರಸಾದ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಅಗ್ರಹಾರ ರಘುಪತಿ ತಂತ್ರಿ ಪ್ರಾಸ್ತಾವಿಕ ಮಾತನಾಡಿದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…