ಮಂಗಳೂರು:ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಕ್ಷಿತಿಜಗಳನ್ನು ಅನ್ವೇಷಿಸುವ ಮತ್ತು ಮುಂದಿನ ಬೆಳವಣಿಗೆಗೆ ಹೊಸ ಚಿಂತನೆಗಳನ್ನು ಅರಸುವ ಸಲುವಾಗಿ ಮಂಗಳೂರಿನ ಎಂ.ಸಿ.ಸಿ.ಬ್ಯಾಂಕ್ ಚಿಂತನಾ ಶೃಂಗ 2025ನ್ನು ಆಯೋಜಿಸಿತ್ತು.
ಅತ್ತಾವರದ ಹೊಟೇಲ್ ಅವತಾರ್ ನಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೋ ವಹಿಸಿದ್ದರು.
ಸಭೆಯಲ್ಲಿ ಎಂ.ಸಿ.ಸಿ. ಬ್ಯಾಂಕಿನ ಬೆಳವಣಿಗೆಯ ಮಾಹಿತಿಯನ್ನು ಪ್ರಸ್ತುತಪಡಿಸಲಾಯಿತು.
ತಮ್ಮ ಉದ್ಘಾಟನಾ ಭಾಷಣದಲ್ಲಿ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ ಅವರು ಬ್ಯಾಂಕ್ ಕಳೆದ ಒಂದು ಶತಮಾನದಲ್ಲಿ ಸಾಗಿ ಬಂದ ಪ್ರಯಾಣವನ್ನು ಉಲ್ಲೇಖಿಸಿದರು. ಕಳೆದ ಏಳು ವರ್ಷಗಳಲ್ಲಿ ಸಾಧಿತವಾದ ತ್ವರಿತಗತಿಯ ಪ್ರಗತಿ ಮುಂದೆಯೂ ಮುಂದುವರಿಯಬೇಕು ಎಂದರು.
ಬ್ಯಾಂಕ್ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳ ಬೇಕು ಎಂದೂ ಅವರು ಸಲಹೆ ಮಾಡಿದರು.
ಮಂಗಳೂರು ಬಿಷಪ್ ರೆವೆರೆಂಡ್ ಡಾ. ಪೀಟರ್ ಪೌಲ್ ಸಲ್ದಾನ ಮಾತನಾಡಿ ಗುಣ ಮಟ್ಟದ ಮತ್ತು ನಗುಮೊಗದ ಸೇವೆ ಇದ್ದರೆ ಗ್ರಾಹಕರು ಹೆಚ್ಚುತ್ತಾರೆ ಎಂದರು.
ದಿಕ್ಸೂಚಿ ಭಾಷಣ ಮಾಡಿದ ಮೈಕೆಲ್ ಡಿಸೋಜಾ ಬ್ಯಾಂಕಿನ ದೀರ್ಘ ಕಾಲೀನ ಯೋಜನೆಗೆ ಇಂತಹ ಚಿಂತನ ಕಾರ್ಯಕ್ರಮಗಳು ಹೊಸ ನೋಟವನ್ನು ಒದಗಿಸುತ್ತವೆ ಎಂದರು.
ಅಧ್ಯಕ್ಷ ಭಾಷಣ ಮಾಡಿದ ಸಹಕಾರ ರತ್ನ ಅನಿಲ್ ಲೋಬೋ ಬಂದಿರುವ ಸಲಹೆ ಸೂಚನೆಗಳು ಬಹಳ ಉಪಯುಕ್ತವಾದಂತಹವು ಎಂದು ಶ್ಲಾಘಿಸಿದರು.
ಮ್ಯಾಕ್ಸಿಂ ಫೆರ್ನಾಂಡೀಸ್, ಡಾ.ಅಲೋಶಿಯಸ್ ಸಿಕ್ವೇರಾ, ಎಲ್. ಅರ್ಹಾನ್ನ, ಅಲೆನ್ ಪಿರೇರಾ, ಫೌಸ್ಟಿನ್ ಲೋಬೋ, ಡಾ. ವಿನ್ಸೆಂಟ್ ಆಳ್ವಾ , ಪೀಯುಸ್ ರೋಡ್ರಿಗಸ್, ಅಲ್ವಿನ್ ಕ್ರಾಸ್ಟಾ, ಮತ್ತಿತರರು ಪಾಲ್ಗೊಂಡಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…