ಮಂಗಳೂರು:ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಕ್ಷಿತಿಜಗಳನ್ನು ಅನ್ವೇಷಿಸುವ ಮತ್ತು ಮುಂದಿನ ಬೆಳವಣಿಗೆಗೆ ಹೊಸ ಚಿಂತನೆಗಳನ್ನು ಅರಸುವ ಸಲುವಾಗಿ ಮಂಗಳೂರಿನ ಎಂ.ಸಿ.ಸಿ.ಬ್ಯಾಂಕ್ ಚಿಂತನಾ ಶೃಂಗ 2025ನ್ನು ಆಯೋಜಿಸಿತ್ತು.
ಅತ್ತಾವರದ ಹೊಟೇಲ್ ಅವತಾರ್ ನಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೋ ವಹಿಸಿದ್ದರು.
ಸಭೆಯಲ್ಲಿ ಎಂ.ಸಿ.ಸಿ. ಬ್ಯಾಂಕಿನ ಬೆಳವಣಿಗೆಯ ಮಾಹಿತಿಯನ್ನು ಪ್ರಸ್ತುತಪಡಿಸಲಾಯಿತು.
ತಮ್ಮ ಉದ್ಘಾಟನಾ ಭಾಷಣದಲ್ಲಿ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ ಅವರು ಬ್ಯಾಂಕ್ ಕಳೆದ ಒಂದು ಶತಮಾನದಲ್ಲಿ ಸಾಗಿ ಬಂದ ಪ್ರಯಾಣವನ್ನು ಉಲ್ಲೇಖಿಸಿದರು. ಕಳೆದ ಏಳು ವರ್ಷಗಳಲ್ಲಿ ಸಾಧಿತವಾದ ತ್ವರಿತಗತಿಯ ಪ್ರಗತಿ ಮುಂದೆಯೂ ಮುಂದುವರಿಯಬೇಕು ಎಂದರು.
ಬ್ಯಾಂಕ್ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳ ಬೇಕು ಎಂದೂ ಅವರು ಸಲಹೆ ಮಾಡಿದರು.
ಮಂಗಳೂರು ಬಿಷಪ್ ರೆವೆರೆಂಡ್ ಡಾ. ಪೀಟರ್ ಪೌಲ್ ಸಲ್ದಾನ ಮಾತನಾಡಿ ಗುಣ ಮಟ್ಟದ ಮತ್ತು ನಗುಮೊಗದ ಸೇವೆ ಇದ್ದರೆ ಗ್ರಾಹಕರು ಹೆಚ್ಚುತ್ತಾರೆ ಎಂದರು.
ದಿಕ್ಸೂಚಿ ಭಾಷಣ ಮಾಡಿದ ಮೈಕೆಲ್ ಡಿಸೋಜಾ ಬ್ಯಾಂಕಿನ ದೀರ್ಘ ಕಾಲೀನ ಯೋಜನೆಗೆ ಇಂತಹ ಚಿಂತನ ಕಾರ್ಯಕ್ರಮಗಳು ಹೊಸ ನೋಟವನ್ನು ಒದಗಿಸುತ್ತವೆ ಎಂದರು.
ಅಧ್ಯಕ್ಷ ಭಾಷಣ ಮಾಡಿದ ಸಹಕಾರ ರತ್ನ ಅನಿಲ್ ಲೋಬೋ ಬಂದಿರುವ ಸಲಹೆ ಸೂಚನೆಗಳು ಬಹಳ ಉಪಯುಕ್ತವಾದಂತಹವು ಎಂದು ಶ್ಲಾಘಿಸಿದರು.
ಮ್ಯಾಕ್ಸಿಂ ಫೆರ್ನಾಂಡೀಸ್, ಡಾ.ಅಲೋಶಿಯಸ್ ಸಿಕ್ವೇರಾ, ಎಲ್. ಅರ್ಹಾನ್ನ, ಅಲೆನ್ ಪಿರೇರಾ, ಫೌಸ್ಟಿನ್ ಲೋಬೋ, ಡಾ. ವಿನ್ಸೆಂಟ್ ಆಳ್ವಾ , ಪೀಯುಸ್ ರೋಡ್ರಿಗಸ್, ಅಲ್ವಿನ್ ಕ್ರಾಸ್ಟಾ, ಮತ್ತಿತರರು ಪಾಲ್ಗೊಂಡಿದ್ದರು.
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…