ನಿರಂತರವಾಗಿ ಏಳು ದಿನಗಳ ಕಾಲ ರಾತ್ರಿ ಹಗಲೆನ್ನದೆ ದಿನವಿಡೀ 170 ಗಂಟೆಗಳ ಭರತನಾಟ್ಯ ಪ್ರದರ್ಶಿಸುವ ಮೂಲಕ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಅಂತಿಮ ಬಿಎ ವಿದ್ಯಾರ್ಥಿನಿ ರೆಮೋನಾ ಸಾಧನೆ ಈಗ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರ್ಪಡೆಯಾಗಿದೆ.
ಕಾಲೇಜಿನ ರಾಬರ್ಟ್ ಸಿಕ್ವೇರಾ ಹಾಲ್ನಲ್ಲಿ ರೆಮೋನಾ ಭರತನಾಟ್ಯ ಪ್ರದರ್ಶನ ನೀಡಿದ್ದಾರೆ. ಸತತ 127 ಗಂಟೆ ಭರತನಾಟ್ಯ ಪ್ರದರ್ಶನ ನೀಡಿದ್ದೇ ಈವರೆಗಿನ ದಾಖಲೆಯಾಗಿತ್ತು. ಇದೀಗ 170 ಗಂಟೆ ಸತತ ಪ್ರದರ್ಶನ ನೀಡುವ ಮೂಲಕ ರೆಮೋನಾ ಪಿರೇರಾ ವಿಶ್ವಮಟ್ಟದಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ. ಕಳೆದ 13 ವರ್ಷಗಳಿಂದ ರೆಮೋನಾ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾರೆ. ಈಗಾಗಲೇ ಭರತನಾಟ್ಯದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ವಿಶ್ವದಾಖಲೆಗಾಗಿ ಹಲವು ವರ್ಷಗಳಿಂದ ಸಿದ್ಧತೆ ಮಾಡಿದ್ದಾರೆ. ಪ್ರತಿದಿನ 5 ರಿಂದ 6ಗಂಟೆ ಭರತನಾಟ್ಯ ಅಭ್ಯಾಸ ಮಾಡಿದ್ದಾರೆ. ವಿದ್ಯೆಯ ಜೊತೆ ಭರತನಾಟ್ಯಕ್ಕೂ ಸಮಾನ ಪ್ರಾಶಸ್ತ್ಯ ನೀಡಿದ್ದಾರೆ.
ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿಗಳ ಸಮ್ಮುಖದಲ್ಲಿಯೇ ರೆಮೋನಾ ಭರತನಾಟ್ಯ ಪ್ರದರ್ಶಿಸಿದ್ದಾರೆ. ಏಳು ದಿನಗಳ ಪ್ರದರ್ಶನ ಕ್ಯಾಮರಾದ ಮೂಲಕ ರೆಕಾರ್ಡ್ ಮಾಡಲಾಗಿದೆ. ಅಧಿಕಾರಿಗಳು ರೆಮೋನಾ ಸಾಧನೆಯನ್ನ ಸಂಪೂರ್ಣವಾಗಿ ದಾಖಲೀಕರಣ ಮಾಡಿಕೊಂಡಿದ್ದಾರೆ. ರೆಮೋನಾ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಶಿಕ್ಷಕರು, ಸಹಪಾಠಿಗಳಿಂದಲೂ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಇದೀಗ, ರೆಮೋನಾ ಸಾಧನೆಗೆ ಸಹಪಾಠಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ದಾಖಲೆ ಬರೆಯುವುದಕ್ಕಾಗಿ ಭರತನಾಟ್ಯ ಪ್ರದರ್ಶಿಸುತ್ತಿದ್ದ ಸಂದರ್ಭ ರೆಮೋನಾ ಮಿತ ಆಹಾರ ಸೇವಿಸುತ್ತಿದ್ದರು. ಪ್ರತಿ 3 ಗಂಟೆಗೊಮ್ಮೆ 15 ನಿಮಿಷದ ವಿಶ್ರಾಂತಿ ಇರುತ್ತಿತ್ತು. ಈ ವೇಳೆಯಲ್ಲಿ ಬಾಳೆಹಣ್ಣು, ಮೊಸರು, ಎಳನೀರು, ಚೆನ್ನಾಗಿ ಬೇಯಿಸಿದ ಬೆಳ್ತಿಗೆ ಅನ್ನ ಸೇವನೆ ಮಾಡಿದ್ದರು. ಇದಕ್ಕೆಂದೇ ಹಲವು ತಿಂಗಳುಗಳಿ0ದ ಆಹಾರ ಕ್ರಮವನ್ನು ಅಭ್ಯಾಸ ಮಾಡಿದ್ದರು.
ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆಗಾಗಿ ರೆಮೋನಾ ಪಿರೇರಾ ನಿರಂತರ ಭರತನಾಟ್ಯ ಮಾಡುತ್ತಿದ್ದಾಗ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಅಂಬುಲೆನ್ಸ್ ಒಳಗೊಂಡ ತಂಡವೂ ಸ್ಥಳದಲ್ಲಿ ಹಾಜರಿತ್ತು. ಪ್ರತಿ ಬಾರಿ 3 ಗಂಟೆಗೊಮ್ಮೆ ವಿಶ್ರಾಂತಿ ಪಡೆಯುತ್ತಿದ್ದಾಗ ವೈದ್ಯರು ಆರೋಗ್ಯ ತಪಾಸಣೆ ಮಾಡುತ್ತಿದ್ದರು. ಒಟ್ಟು ಏಳು ದಿನಗಳ ಅವಧಿಯಲ್ಲಿ ರೆಮೋನಾ ಪಿರೇರಾ ಭರತನಾಟ್ಯದ ವಿವಿಧ ಪ್ರಕಾರಗಳ ಪ್ರದರ್ಶನ ಮಾಡಿ ತೋರಿಸಿದ್ದಾರೆ. ಅದಕ್ಕೆ ತಕ್ಕಂತೆ ರೆಕಾರ್ಡೆಡ್ ಹಾಡುಗಳನ್ನು ಬಳಕೆ ಮಾಡಲಾಗಿತ್ತು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…