ಶಾರದಾ ಸೇವಾ ಪ್ರತಿಷ್ಠಾನ ಹಾಗೂ ಉತ್ಸವ ಸಮಿತಿ ಕಲ್ಲಡ್ಕ ಇದರ ವತಿಯಿಂದ ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಬಿಜೆಪಿ ಸಕ್ರೀಯ ಕಾರ್ಯಕರ್ತ,ಸಂಘದ ಸ್ವಯಂಸೇವಕ, ನಾಟಕ ಕಲಾವಿದ, ಶಾರದಾ ಪ್ರತಿಷ್ಠಾನದ ಸ್ಥಾಪಕ ಸದಸ್ಯ ಚಿ.ರಮೇಶ್ ಅವರಿಗೆ ನುಡಿನಮನ ಕಾರ್ಯಕ್ರಮ ಕಲ್ಲಡ್ಕ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ನುಡಿನಮನ ಕಾರ್ಯಕ್ರಮದಲ್ಲಿ ಆರ್.ಎಸ್.ಎಸ್.ಪ್ರಮುಖರಾದ ಶ್ರೀರಾಮ ವಿದ್ಯಾ ಕೇಂದ್ರದ ಸ್ಥಾಪಕರಾದ ಡಾ.ಪ್ರಭಾಕರ್ ಭಟ್ ಅವರು ಮಾತನಾಡಿ, ರಂಗಭೂಮಿಯೇ ಅವರಿಗೆ ಬದುಕಾಗಿತ್ತು, ಪ್ರತಿಯೊಂದು ಪಾತ್ರಕ್ಕೂ ಜೀವ ತುಂಬಿದ್ದಾರೆ. ಚಿ.ರಮೇಶ್ ಅವರು ಮಾಡುತ್ತಿದ್ದನಾಟಕದ ಪಾತ್ರ ಜೀವನದಲ್ಲಿ ನಾವು ಇರಬೇಕಾದ ಸಂದೇಶ ನೀಡುವ ಪಾತ್ರವಾಗಿತ್ತು ಅಮೂಲಕ ಜನರಿಗೆ ಹೆಚ್ಚು ಪ್ರಿಯರಾಗಿದ್ದು, ಅನೇಕ ಹಾಸ್ಯ ನಾಟಕಗಳ ಮೂಲಕ ಮಿಂಚಿದ್ರು. ನಾಟಕದಲ್ಲಿ ನಾನು ನೀಡುವ ಸಂದೇಶದಂತೆಯೇ ಬದುಕಬೇಕು ಎಂಬ ಕಲ್ಪನೆಯಲ್ಲಿ ಬದುಕು ಸಾಗಿಸಿದವರು.
ವೈಯಕ್ತಿಕ ಜೀವನದಲ್ಲಿ ಅನೇಕ ಕಷ್ಟಗಳಿದ್ದರು ಇತರರಿಗೆ ನೋವು ಕೊಟ್ಟವರಲ್ಲ, ನಗುಮೊಗದಿಂದ ಮಾತನಾಡುತ್ರಿದ್ದರು. ಅಜಾತಶತ್ರುವಾಗಿ ಬದುಕು ಕಳೆದವರು ಎಂದು ಅವರ ವೈಯಕ್ತಿಕ ಜೀವನದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…