ಬಿಜೈನಲ್ಲಿರುವ ಭಾರತಿ ಬಿಲ್ಡರ್ಸ್ ಕಛೇರಿ ಮೇಲೆ ಶೂಟೌಟ್ ನಡೆಸಿ ಸುಮಾರು 10 ವರ್ಷದಿಂದ ನಾಪತ್ತೆಯಾಗಿದ್ದ ಭೂಗತ ಪಾತಕಿ ರವಿ ಪೂಜಾರಿ ಸಹಚರನನ್ನು ಉರ್ವಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತನನ್ನು ಕರಾಡ್ ಗಣೇಶ್ ಲಕ್ಷ್ಮಣ್ ಸಕಟ್ ಎಂದು ಗುರುತಿಸಲಾಗಿದೆ. ಈತ ಭೂಗತ ಪಾತಕಿ ರವಿಪೂಜಾರಿಯ ಸಹಚರನಾಗಿದ್ದು, ಆತನ ಅಣತಿ ಮೇಲೆ ಶೂಟೌಟ್ ನಡೆಸಿದ್ದ. ಈತನ ಮೇಲೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ 2015 ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಈತನ ವಿರುದ್ದ ಜೆಎಂಎಫ್ ಸಿ 3ನೇ ನ್ಯಾಯಾಲಯ ವಾರಂಟ್ ಹೊರಡಿಸಿದ್ದು, ಈತನನ್ನು ಮಹಾರಾಷ್ಟ್ರ ರಾಜ್ಯದ ಪಂಡರಾಪುರ ಎಂಬಲ್ಲಿ, ಪೊಲೀಸ್ ಆಯುಕ್ತರ ಮಾರ್ಗದರ್ಶನದಂತೆ ಉರ್ವಾ ಪೊಲೀಸ್ ಠಾಣಾ ನಿರೀಕ್ಷಕರ ತಂಡ ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಈತನ ವಿರುದ್ದ ಮಹಾರಾಷ್ಟ್ರ ರಾಜ್ಯದ ಸತಾರ ಜಿಲ್ಲೆ ಕರಾq ನಲ್ಲಿಯೂ ಆರ್ಮ್ಸ ಆ್ಯಕ್ಟ್ ಪ್ರಕರಣ ದಾಖಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…