ಈಗಂತೂ ಮಹಿಳೆಯರು ಒಬ್ಬಂಟಿಯಾಗಿ ಓಡಾಡುವುದೇ ಕಷ್ಟಸಾಧ್ಯವಾಗಿದೆ. ಮಹಿಳೆಯರು ಮಾತ್ರವಲ್ಲ, ಪುಟ್ಟ ಬಾಲಕಿಯರಿಗೂ ಸಮಾಜದಲ್ಲಿ ಸುರಕ್ಷತೆಯಿಲ್ಲ ಎಂದು ತೋರಿಸುವಂತಹ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ವ್ಯಕ್ತಿಯೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಗೆ ಮುತ್ತಿಟ್ಟು ಕಿರುಕುಳ ನೀಡಿದ್ದಾನೆ.
ಈತನ ಈ ದುಷ್ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಕೆಲವೊಂದು ಅಹಿತಕರ ಘಟನೆಗಳನ್ನು ನೋಡಿದಾಗ ಈ ಸಮಾಜದಲ್ಲಿ ಮಹಿಳೆಯರಿಗೆ ಸುರಕ್ಷತೆಯಿಲ್ಲ ಎಂದೆನಿಸುತ್ತದೆ. ಆದ್ರೆ ಇಲ್ಲೊಂದು ನಡೆದಿರುವ ನಾಚಿಕೆಗೇಡಿನ ಸಂಗತಿಯನ್ನು ನೋಡಿದರೆ ಮಹಿಳೆಯರಷ್ಟೇ ಅಲ್ಲ, ಪುಟ್ಟ ಹೆಣ್ಣು ಮಕ್ಕಳಿಗೂ ಸಮಾಜದಲ್ಲಿ ಸುರಕ್ಷತೆಯಿಲ್ಲ ಎಂದೆನಿಸುತ್ತದೆ. ಇಂತಹದ್ದೊಂದು ಘಟನೆ ಪಾಕಿಸ್ತಾನದಲ್ಲಿ ನಡೆದಿದ್ದು, ಕಾಮುಕನೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗ್ತಿದ್ದ ಪುಟ್ಟ ಬಾಲಕಿಗೆ ಮುತ್ತಿಟ್ಟು ಆಕೆಗೆ ಕಿರುಕುಳ ನೀಡಿದ್ದಾನೆ. ಈತನ ಈ ದುಷ್ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಘಟನೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.ತನ್ನ ತಮ್ಮನೊಂದಿಗೆ ಪುಟ್ಟ ಬಾಲಕಿಯೊಬ್ಬಳು ಎಲ್ಲಿಗೋ ನಡೆದುಕೊಂಡು ಹೋಗುತ್ತಿದ್ದ ವೇಳೆ, ಇತ್ತ ಕಡೆಯಿಂದ ಬರುತ್ತಿದ್ದ ವ್ಯಕ್ತಿಯೊಬ್ಬ ಯಾರ ಭಯವೂ ಇಲ್ಲದೆ ರಾಜಾರೋಷವಾಗಿ ಆ ಬಾಲಕಿಗೆ ಮುತ್ತಿಟ್ಟು ಕಿರುಕುಳ ನೀಡಿದ್ದಾನೆ. ಈ ಘಟನೆ ಜುಲೈ 25 ರಂದು ಪಾಕಿಸ್ತಾನದ ಕಸೂರ್ನ ಶಾ ಇನಾಯತ್ ಕಾಲೋನಿಯಲ್ಲಿ ನಡೆದಿದ್ದು ಎಂದು ಹೇಳಲಾಗುತ್ತಿದೆ. ಈತನ ರಾಕ್ಷಸತನವನ್ನು ಕಂಡು ಆ ಪುಟ್ಟ ಹುಡುಗಿಯ ತಮ್ಮ ಜೋರಾಗಿ ಅತ್ತಿದ್ದು, ಈ ದೃಶ್ಯ ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…