38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021 ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ.
ಆಗಸ್ಟ್ 5 ರಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಿರ್ಧಾರ ಮಾಡಿದ್ದು, ಈಗಾಗಲೇ ಸಿಎಂ ಹಾಗೂ ನಾಲ್ಕು ನಿಗಮದ ಎಂಡಿಗಳಿಗೆ ನೊಟೀಸ್ ನೀಡಿದ್ದಾರೆ. ಸಾರಿಗೆ ನೌಕರರ ಪ್ರಮುಖ ಎರಡು ಬೇಡಿಕೆಗಳೆಂದರೆ, ಬಾಕಿ ವೇತನ ಬಿಡುಗಡೆ ಮತ್ತು ಹೊಸ ವೇತನದಲ್ಲಿ ಪರಿಷ್ಕರಣೆ ಮಾಡಬೇಕು ಎಂಬುದಾಗಿದೆ. ಇದನ್ನು ಶೀಘ್ರ ಮಾಡುವಂತೆ ನೌಕರರು ಆಗ್ರಹಿಸಿದ್ದಾರೆ. ಮಾಡದಿದ್ದರೆ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುವುದು ಎಚ್ಚರಿಸಿದ್ದಾರೆ. ನಾವು ಎಸ್ಮಾ, ವಜಾಗೊಳಿಸುವ ತಂತ್ರಗಳಿಗೆ ಹೆದರುವ ಮಾತೇ ಇಲ್ಲ ಎಂದು ಫ್ರೀಡಂ ಪಾರ್ಕ್ನಲ್ಲಿ ಸಾಮೂಹಿಕ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಸರ್ಕಾರಕ್ಕೆ ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ. ಒಟ್ಟಿನಲ್ಲಿ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆ ಮೂಲಕ ಶಕ್ತಿ ತುಂಬಿದ್ದ ಸರ್ಕಾರ, ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುತ್ತದೆಯೇ ಅಥವಾ ಹಿಂದಿನಂತೆ ಮನವೊಲಿಸಿ ಮುಷ್ಕರ ವಾಪಸ್ಸು ಪಡೆಯುವಂತೆ ಮಾಡುತ್ತದೆಯಾ ಎಂಬುದನ್ನು ನೋಡಬೇಕಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…