ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಉದ್ದಿಮೆ ಪರವಾನಿಗೆ, ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಟಿಸಿ ವಂಚನೆ; ಆರೋಪಿ ಬಂಧನ

ಮಂಗಳೂರು ಮಹಾ ನಗರ ಪಾಲಿಕೆಯ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಟಿ ಮತ್ತು ವಂಚನೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೃಥ್ವಿರಾಜ್ ಶೆಟ್ಟಿ ಅಲಿಯಾಸ್ ಮುನ್ನ ಬಂಧಿತ ಆರೋಪಿ.

ಈತ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‘ಶ್ರೀ ರಾಜ ದುರ್ಗಾ ಫರ್ನಿಚರ್ ವರ್ಕ್ಸ್’ ಎಂಬ ಉದ್ದಿಮೆ ಹೊಂದಿರುವ ಬಾಲಕೃಷ್ಣ ಸುವರ್ಣ ಎಂಬವರು ನ್ಯಾಯಾಲಯದ ಪ್ರಕರಣದಲ್ಲಿ ವ್ಯವಹರಿಸಲು ದಾಖಲಾತಿಗಳನ್ನು ಪಡೆದುಕೊಳ್ಳಲು ಮಂಗಳೂರು ಮಹಾನಗರ ಪಾಲಿಕೆಗೆ ಭೇಟಿ ನೀಡಿದ್ದು, ಆ ಸಂದರ್ಭ ಅವರ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಅನೂರ್ಜಿತಗೊಂಡಿರುವುದು ತಿಳಿದು ಬಂದಿರುತ್ತದೆ. ಆದರೆ ಬಾಲಕೃಷ್ಣ ಸುವರ್ಣರವರಲ್ಲಿ ಊರ್ಜಿತವಾಗಿರುವ ಉದ್ದಿಮೆ ಪರವಾನಗಿ ಹಾಗೂ ಆಸ್ತಿ ತೆರಿಗೆ ಇದ್ದು, ಇದನ್ನು ಪರಿಶೀಲಿಸಿದಾಗ ಬಾಲಕೃಷ್ಣ ಸುವರ್ಣರವರಿಂದ ಪೃಥ್ವಿರಾಜ್ ಶೆಟ್ಟಿ ಅಲಿಯಾಸ್ ಮುನ್ನಾ ಎಂಬಾತನು 27,990 ರೂ. ಹಣವನ್ನು ಪಡೆದುಕೊಂಡು ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ರಶೀದಿಗಳನ್ನು ನಕಲಿಯಾಗಿ ಸೃಷ್ಟಿಸಿ ನೀಡಿರುವುದು ತಿಳಿದು ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಮಹಾ ನಗರ ಪಾಲಿಕೆಯ ಆಯುಕ್ತರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಜೊತೆಗೆ ಬಾಲಕೃಷ್ಣ ಸುವರ್ಣರವರು ನಕಲಿ ಉದ್ದಿಮೆ ಪರವಾನಿಗೆಯನ್ನು ಹಾಗೂ ಆಸ್ತಿ ತೆರಿಗೆಯನ್ನು ಸೃಷ್ಟಿಸಿ ವಂಚಿಸಿರುವ ಬಗ್ಗೆ ಪೃಥ್ವಿರಾಜ್ ಶೆಟ್ಟಿ ವಿರುದ್ಧ ದೂರು ನೀಡಿ ಪ್ರಕರಣ ದಾಖಲಾಗಿದ್ದು, ತನಿಖೆ ಇನ್ನು ಕೂಡ ಪ್ರಗತಿಯಲ್ಲಿದೆ. ಇನ್ನು ಪಂಪ್ ವೆಲ್ ನಲ್ಲಿರುವ ಲಕ್ಷ್ಮಿ ಹಾರ್ಡ್ ವೇರ್ ವರ್ಕ್ ಶಾಪ್ ನ ಮಾಲೀಕರಾದ ದೇವಾಂಗ ಕೆ. ಪಟೇಲ್ ರವರು ಕೂಡಾ ಪೃಥ್ವಿರಾಜ್ ಶೆಟ್ಟಿ ನಕಲಿ ಉದ್ದಿಮೆ ಪರವಾನಿಗೆಯನ್ನು ಹಾಗೂ ನಕಲಿ ಆಸ್ತಿ ತೆರಿಗೆಯನ್ನು ಸೃಷ್ಟಿಸಿ ವಂಚಿಸಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿ ಪ್ರಕರಣ ದಾಖಲಾಗಿರುತ್ತದೆ. ಪ್ರಕರಣ ದಾಖಲಾದ ವೇಳೆ ಮಂಗಳೂರು, ಉಜ್ಜೋಡಿ, ಬೈಕ್ ಕ್ಲಿನಿಕ್ ಹತ್ತಿರದ ನಿವಾಸಿಯಾಗಿದ್ದ ಆರೋಪಿ ಪೃಥ್ವಿರಾಜ್ ಶೆಟ್ಟಿ ತಲೆಮರೆಸಿಕೊಂಡಿದ್ದ. ಆರೋಪಿಯು ಕೇರಳದ ಹಲವು ಕಡೆಗಳಲ್ಲಿ ತಲೆಮರೆಸಿಕೊಂಡು ನಂತರ ಕಿನ್ನಿಗೋಳಿಗೆ ಬರುತ್ತಿದ್ದಾನೆ ಎಂಬ ಮಾಹಿತಿಯ ಮೇರೆಗೆ ಜುಲೈ 25ರಂದು ಕಂಕನಾಡಿ ನಗರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಇನ್ನೂ ಇತರ ಉದ್ದಿಮೆದಾರರಿಗೆ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ನೀಡಿರುತ್ತಾನೆಯೇ ಎಂಬ ಬಗ್ಗೆ ಕಂಕನಾಡಿ ಮತ್ತು ಬರ್ಕೆ ಪ್ರಕರಣಗಳಲ್ಲಿ ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!