ದಕ್ಷಿಣ ಕನ್ನಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ರಾಜು ಕೆ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಇವರು ಜಿಲ್ಲಾ ಕೆಐಎಡಿಬಿ ಮಂಗಳೂರಿನ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪರ ಜಿಲ್ಲಾಧಿಕಾರಿಯಾಗಿದ್ದ ಡಾ ಜಿ ಸಂತೋಷ್ ಕುಮಾರ್ ಅವರನ್ನು ರಾಜು ಕೆ ಅವರಿಂದ ತೆರವಾದ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ರಾಜು ಕೆ ಅವರು ಸ್ಮಾರ್ಟ್ ಸಿಟಿಯ ಎಂಡಿ, ಉಡುಪಿ, ಕಾಪು ಬಹ್ಮಾವರ ಸಹಾಯಕ ಆಯುಕ್ತರಾಗಿ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸುತ್ತಿದ್ದರು. ಮಂಗಳೂರು ಹಾಗೂ ಕುಂದಾಪುರ ಸಹಾಯಕ ಆಯುಕ್ತರಾಗಿದ್ದರು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವೆ ಸೇರಿದಂತೆ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು.



