ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಹಾಗೂ ಅದರ ಬೆಂಗಾವಲಿಗೆ ಬಳಕೆ ಮಾಡುತ್ತಿದ್ದ ಸ್ಕೂಟರ್ನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳವಾರದಂದು ಪೊಲೀಸ್ ಉಪನಿರೀಕ್ಷಕ ಶಿವಕುಮಾರ್ ಅವರು ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಆಡಂಕುದ್ರುವಿನ ಚಾಪೆಲ್ ಚರ್ಚ್ ರಸ್ತೆಯಲ್ಲಿ ಬೆಳಗ್ಗೆ 6.30ಕ್ಕೆ ಬರುತ್ತಿದ್ದ ಪಿಕಪ್ನ ಚಾಲಕನು ಪೊಲೀಸರನ್ನು ಕಂಡು ವಾಹನವನ್ನು ನಿಲ್ಲಿಸಿ ಕೆಳಗೆ ಇಳಿದು ಓಡಿ ಹೋಗಿದ್ದಾನೆ. ಅದರ ಹಿಂದಿನಿಂದ ಬರುತ್ತಿದ್ದ ಸ್ಕೂಟರ್ನ ಸವಾರ ನೌಷದ್ ಆಲಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆತ ತಾನು ಸುನೀಲ್ ಡಿಸೋಜಾರೊಂದಿಗೆ ಸೇರಿ ಆಡಂಕುದ್ರುವಿನಲ್ಲಿ ನೇತ್ರಾವತಿ ನದಿಯ ತೀರದಿಂದ ಮರಳು ತುಂಬಿಸಿಕಕೊಂಡು ಹೋಗುತ್ತಿದ್ದು ಪಿಕಪ್ ವಾಹನಕ್ಕೆ ಸ್ಕೂಟರ್ನ್ನು ಬೆಂಗವಲಾಗಿ ಬಳಕೆ ಮಾಡುತ್ತಿರುವುದಾಗಿ ತಿಳಿಸಿದ್ದಾನೆ. ಆರೋಪಿಗಳು ರಾಜ್ಯ ಸರಕಾರಕ್ಕೆ ರಾಜಧನ ಪಾವತಿಸದೆ ಮರಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿರುವುದು ಖಚಿತವಾಗಿದೆ. ಪಿಕಪ್ ವಾಹನ, ಸುಮಾರು 40 ಬುಟ್ಟಿ ಮರಳು ಮತ್ತು ಸ್ಕೂಟರ್ನ್ನು ವಶಪಡಿಸಿಕೊಳ್ಳಳಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…