ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಹೇಮಂತ್ ಮೃತದೇಹ ಪತ್ತೆ

ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕಡೇಶಿವಾಲಯ ನಿವಾಸಿ 21ವರ್ಷದ ಹೇಮಂತ್ ಆಚಾರ್ಯ ಎಂಬಾತನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.

ಕಂಕನಾಡಿ ಪೋಲೀಸ್ ಠಾಣಾ ವ್ಯಾಪ್ತಿಯ ಬಜಾಲ್ ಮುಗೇರು ಎಂಬಲ್ಲಿ ನೇತ್ರಾವತಿ ನದಿ ಮಧ್ಯ ಭಾಗದಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜುಲೈ 27ರಂದು ಹೇಮಂತ್ ಮನೆಯಿಂದ ನಾಪತ್ತೆಯಾಗಿದ್ದ, ಈ ಬಗ್ಗೆ ಜುಲೈ 28ರಂದು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನಿಂದ ಹೇಮಂತ್‌ಗಾಗಿ ಹುಡುಕಾಟ ನಡೆದಿತ್ತು. ಇನ್ನು ಜುಲೈ 31ರಂದು ಮತ್ತೆ ಕಡೇಶಿವಾಲಯ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಪ್ರಮುಖರಾದ ಸಂಪತ್ ಸುವರ್ಣ ಅವರ ಮುತುವರ್ಜಿಯಿಂದ ಈಶ್ವರ ಮಲ್ಪೆ ಅವರ ತಂಡವನ್ನು ಹಾಗೂ ಎನ್.ಡಿ.ಆರ್.ಎಫ್ ತಂಡವನ್ನು ಕರೆಸಿಕೊಂಡು ಅಗ್ನಿಶಾಮಕ ದಳದ ಜೊತೆ ಜಂಟಿಯಾಗಿ ಸ್ಥಳೀಯ ಈಜುಗಾರ ನಿಸಾರ್ ಅವರೊಂದಿಗೆ ಜಕ್ರಿಬೆಟ್ಟುವಿನಿಂದ ತುಂಬೆವರೆಗೂ ಶೋಧ ನಡೆಸಿತ್ತು. ಅದರಲ್ಲಿ ಯಾವುದೇ ರೀತಿಯ ಪ್ರಯೋಜನವಾಗಿರದ ಹಿನ್ನೆಲೆಯಲ್ಲಿ ಮಧ್ಯಾಹ್ನದ ಬಳಿಕ ತುಂಬೆ ಡ್ಯಾಂ ನಿಂದ ಕೆಳಭಾಗದಲ್ಲಿ ಮೂರು ತಂಡಗಳ ಜೊತೆಯಲ್ಲಿ ಡ್ರೋನ್ ಬಳಸಿ ಶೋಧ ಕಾರ್ಯ ನಡೆಸಲಾಗಿತ್ತು. ಸಂಜೆ ವೇಳೆ ಡ್ರೋನ್‌ನ ಕಣ್ಣಿಗೆ ಶವವೊಂದು ತೇಲಾಡುವ ಕಂಡಿದ್ದು, ನದಿಯಲ್ಲಿ ಶೋಧ ಕಾರ್ಯದಲ್ಲಿ ತೊಡಗಿದ್ದ ತಂಡ ಈತನ ಮೃತದೇಹವನ್ನು ನದಿಯಿಂದ ಮೇಲಕ್ಕೆತ್ತಿದೆ.

 

Leave a Reply

Your email address will not be published. Required fields are marked *

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

error: Content is protected !!