ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕಡೇಶಿವಾಲಯ ನಿವಾಸಿ 21ವರ್ಷದ ಹೇಮಂತ್ ಆಚಾರ್ಯ ಎಂಬಾತನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಕಂಕನಾಡಿ ಪೋಲೀಸ್ ಠಾಣಾ ವ್ಯಾಪ್ತಿಯ ಬಜಾಲ್ ಮುಗೇರು ಎಂಬಲ್ಲಿ ನೇತ್ರಾವತಿ ನದಿ ಮಧ್ಯ ಭಾಗದಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜುಲೈ 27ರಂದು ಹೇಮಂತ್ ಮನೆಯಿಂದ ನಾಪತ್ತೆಯಾಗಿದ್ದ, ಈ ಬಗ್ಗೆ ಜುಲೈ 28ರಂದು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನಿಂದ ಹೇಮಂತ್ಗಾಗಿ ಹುಡುಕಾಟ ನಡೆದಿತ್ತು. ಇನ್ನು ಜುಲೈ 31ರಂದು ಮತ್ತೆ ಕಡೇಶಿವಾಲಯ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಪ್ರಮುಖರಾದ ಸಂಪತ್ ಸುವರ್ಣ ಅವರ ಮುತುವರ್ಜಿಯಿಂದ ಈಶ್ವರ ಮಲ್ಪೆ ಅವರ ತಂಡವನ್ನು ಹಾಗೂ ಎನ್.ಡಿ.ಆರ್.ಎಫ್ ತಂಡವನ್ನು ಕರೆಸಿಕೊಂಡು ಅಗ್ನಿಶಾಮಕ ದಳದ ಜೊತೆ ಜಂಟಿಯಾಗಿ ಸ್ಥಳೀಯ ಈಜುಗಾರ ನಿಸಾರ್ ಅವರೊಂದಿಗೆ ಜಕ್ರಿಬೆಟ್ಟುವಿನಿಂದ ತುಂಬೆವರೆಗೂ ಶೋಧ ನಡೆಸಿತ್ತು. ಅದರಲ್ಲಿ ಯಾವುದೇ ರೀತಿಯ ಪ್ರಯೋಜನವಾಗಿರದ ಹಿನ್ನೆಲೆಯಲ್ಲಿ ಮಧ್ಯಾಹ್ನದ ಬಳಿಕ ತುಂಬೆ ಡ್ಯಾಂ ನಿಂದ ಕೆಳಭಾಗದಲ್ಲಿ ಮೂರು ತಂಡಗಳ ಜೊತೆಯಲ್ಲಿ ಡ್ರೋನ್ ಬಳಸಿ ಶೋಧ ಕಾರ್ಯ ನಡೆಸಲಾಗಿತ್ತು. ಸಂಜೆ ವೇಳೆ ಡ್ರೋನ್ನ ಕಣ್ಣಿಗೆ ಶವವೊಂದು ತೇಲಾಡುವ ಕಂಡಿದ್ದು, ನದಿಯಲ್ಲಿ ಶೋಧ ಕಾರ್ಯದಲ್ಲಿ ತೊಡಗಿದ್ದ ತಂಡ ಈತನ ಮೃತದೇಹವನ್ನು ನದಿಯಿಂದ ಮೇಲಕ್ಕೆತ್ತಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…