ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ: ಮುಲ್ಕಿ ರಾಜ್ಯ ಹೆದ್ದಾರಿಯಲ್ಲಿ ಮುಖಾಮುಖಿ ಢಿಕ್ಕಿ ಹೊಡೆದ ಕಾರು..!!

ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸಹಿತ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡವರನ್ನು ಕುಂದಾಪುರ ತೆಕ್ಕಟ್ಟೆ ನಿವಾಸಿಗಳಾದ 25ವರ್ಷದ ನಿತಿಲ್, 23ವರ್ಷದ ಅವಿನಾಶ್ ಹಾಗೂ 2ವರ್ಷದ ಮೃತ್ವಿನ್ ಎಂದು ಗುರುತಿಸಲಾಗಿದೆ. ಇನ್ನೊಂದು ಕಾರಿನಲ್ಲಿದ್ದ ಮುಲ್ಕಿ ಮೂಲದ ಮೂವರು ಯುವಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಟೀಲು ಕಡೆಯಿಂದ ದೇವರ ದರ್ಶನ ಮುಗಿಸಿಕೊಂಡು ಕುಂದಾಪುರದ ಕಡೆಗೆ ಹೊರಟಿದ್ದ ಕಾರು, ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕೆರೆಕಾಡು ತಲುಪುತ್ತಿದ್ದಂತೆ ಮುಲ್ಕಿ ಕಡೆಯಿಂದ ಅತಿ ವೇಗದಿಂದ ಬಂದ ಕಾರು ಹೆದ್ದಾರಿಯ ಹೊಂಡ ತಪ್ಪಿಸುವ ಬರದಲ್ಲಿ ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಎರಡು ಕಾರುಗಳು ಪಲ್ಟಿಯಾಗಿದ್ದು ಕಾರಿನಲ್ಲಿ ಸಿಲುಕಿಕೊಂಡವರನ್ನು ತೆಗೆಯಲು ಸ್ಥಳೀಯರು ಹರಸಾಹಸಪಟ್ಟಿದ್ದಾರೆ. ಅಪಘಾತದಿಂದ ಎರಡು ಕಾರುಗಳು ಜಖಂಗೊಂಡಿದ್ದು, ಅಪಘಾತದಿಂದ ಕೆಲ ಹೊತ್ತು ಹೆದ್ದಾರಿ ಸಂಚಾರ ವ್ಯತ್ಯಯ ಉಂಟಾಗಿತ್ತು. ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಭೇಟಿ ನೀಡಿ ಪರಿಶೀಲಿಸಿ ಎರಡು ವಾಹನಗಳನ್ನು ಸ್ಥಳದಿಂದ ಕ್ರೇನ್ ಮೂಲಕ ತೆರವುಗೊಳಿಸಲಾಗಿದೆ.ಅಪಘಾತದ ಭೀಕರ ದೃಶ್ಯ ಸ್ಥಳೀಯ ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!