ತುಳುನಾಡಿನ ಇತಿಹಾಸದ ಭವ್ಯತೆಯನ್ನು ಸಾರುವ ದೇವಾಲಯಗಳು, ಕೋಟೆಗಳು ಈ ಭಾಗವದಲ್ಲಿ ನೋಡಬಹುದು. ಅಂತೆಯೇ ಕುಂಬಳೆ ಅರಸರ ಕೇಂದ್ರವಾಗಿದ್ದ ಕಣ್ವಪುರ ಸನಿಹದಲ್ಲೇ ಕೆಳದಿ ನಾಯಕರ ಕುಂಬ್ಳೆ ಕೋಟೆ ಇದೆ.
ಈ ಕೋಟೆಯನ್ನು 1608ರ ಸುಮಾರಿಗೆ ಇಕ್ಕೇರಿ ದೊರೆ ಹಿರಿಯ ವೆಂಕಟಪ್ಪ ನಾಯಕ ನಿರ್ಮಿಸಿದ್ದು ಇತಿಹಾಸ. ಇತಿಹಾಸದಲ್ಲಿ ಬಾಳಿದ ಕೋಟೆ ಇಂದು ವಿನಾಶದ ಅಂಚಿಕೆ ಹೋಗ್ತಾ ಇದೆ. ಮಳೆಗಾಲದ ಸಮಯದಲ್ಲಿ ಕೋಟೆಯ ಕಲ್ಲುಗಳು ಅದರ ಸುತ್ತ ಮುತ್ತ ಹಸಿರಿನ ಭವ್ಯತೆಯಲ್ಲಿ ಮರೆಯಾಗುವ ಜೊತೆಯಲ್ಲಿ ಇತಿಹಾಸದಿಂದಲೂ ಮರೆಯಾಗುವ ಭೀತಿಯಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ ಇತಿಹಾಸ ಕೋಟೆ ಅಸಹಾಯಕವಾಗಿ ನಿಂತಿದೆ. ಸುತ್ತಲು ಹರಡಿದ ಹಸಿರ ಕಾಡು ಪೊದೆ ಕಣ್ಣಿಗೆ ಸುಂದರಾವಾಗಿ ಕಂಡರೂ ಅದು ಕೋಟೆಯ ಸುತ್ತುವರೆದಾಗ ಇತಿಹಾಸದ ಪತನವೇ ಸರಿ. ಸ್ಥಳೀಯ ಅಧಿಕಾರಿಗಳು, ಕೇರಳ ಪುರಾತತ್ವ ಇಲಾಖೆ ಈ ಬಗ್ಗೆ ಗಮನ ಹರಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು. ಕಾಸರಗೋಡು ಜಿಲ್ಲೆಯಲ್ಲಿ ಬೇಕಲ ಕೋಟೆ ಒಂದು ಬಿಟ್ಟು ಮತ್ತೆಲ್ಲಾ ಕೋಟೆಯ ವ್ಯಥೆ ಇದುವೇ ಆಗಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…