ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ, ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಆಗಸ್ಟ್ 2 ರ ಶನಿವಾರ ಸುರತ್ಕಲ್ ಮತ್ತು ಬಜ್ಪೆ ಪೊಲೀಸ್ ವ್ಯಾಪ್ತಿಯ ಹಲವು ಸ್ಥಳಗಳಲ್ಲಿ ಮಿಂಚಿನ ದಾಳಿಯನ್ನು ನಡೆಸಿದೆ.

ಮೂಲಗಳ ಪ್ರಕಾರ, ಎನ್ಐಎ ಅಧಿಕಾರಿಗಳು ಬಂಧಿತ ಆರೋಪಿಗಳ ನಿವಾಸಗಳು ಸೇರಿದಂತೆ ಸುಮಾರು 14 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಳಿಗ್ಗೆ 6 ಗಂಟೆ ಸುಮಾರಿಗೆ ದಾಳಿ ಪ್ರಾರಂಭವಾಯಿತು ಎಂದು ವರದಿಯಾಗಿದೆ. 
ಮೇ 1 ರ ಸಂಜೆ ಸ್ನೇಹಿತರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಸುಹಾಸ್ ಶೆಟ್ಟಿ ಅವರನ್ನು ಹತ್ಯೆ ಮಾಡಲಾಯಿತು. ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಿನ್ನಿಪದವಿನಲ್ಲಿ ಈ ದಾಳಿ ನಡೆದಿದೆ.



