ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ನೂತನ ಶಕ್ತಿಕೇಂದ್ರದ ಪ್ರಮುಖರ ಸಭೆ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ನೂತನ ಶಕ್ತಿಕೇಂದ್ರದ ಪ್ರಮುಖರ ಸಭೆಯು ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ಅಟಲ್ ಸೇವಾ ಕೇಂದ್ರದಲ್ಲಿ ನಡೆಯಿತು

ಈ ವೇಳೆ ಮಾತನಾಡಿದ ಶಾಸಕರು, ಪಕ್ಷ ಸಂಘಟನಾತ್ಮಕ ನೆಲೆಯಲ್ಲಿ ಶಕ್ತಿಕೇಂದ್ರದ ಪ್ರಮುಖರಿಗೆ ಅತ್ಯಂತ ಹೆಚ್ಚಿನ ಜವಾಬ್ದಾರಿ ಇದೆ. ನಿಮ್ಮೆಲ್ಲರ ಸಾಮರ್ಥ್ಯ ಅರಿತೇ ಪಕ್ಷವು ಅಂತಹ ಜವಾಬ್ದಾರಿಯುತ ಸ್ಥಾನಕ್ಕೆ ಆಯ್ಕೆ ಮಾಡಿದ್ದು, ಅದಕ್ಕೆ ತಕ್ಕಂತೆ ಕಾರ್ಯ ನಿರ್ವಹಿಸುವ ಸಂಕಲ್ಪ ನಿಮ್ಮದಾಗಲಿ. ಹಿರಿಯ ಕಾರ್ಯಕರ್ತರಿಂದ ಸಲಹೆಗಳನ್ನು ಪಡೆದುಕೊಂಡು, ಕಿರಿಯ ಕಾರ್ಯಕರ್ತರನ್ನು ಜೋಡಿಸಿಕೊಂಡು ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ನಿಮ್ಮದು. ಮುಂಬರುವ ದಿನಗಳಲ್ಲಿ ಮಂಡಲ ಹಾಗೂ ಜಿಲ್ಲೆಯ ನೇತೃತ್ವದಲ್ಲಿ ಪಕ್ಷದ ಅನೇಕ ಚಟುವಟಿಕೆಗಳು ನಡೆಯಲಿದ್ದು, ಪ್ರತಿಯೊಂದು ಕಾರ್ಯಕ್ರಮದಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ, ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು, ಜನ ವಿರೋಧಿ ನೀತಿಗಳು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ನಿಮ್ಮ ಸಹಕಾರ ಅತ್ಯಗತ್ಯವಾಗಿದ್ದು, ಮತ್ತೊಮ್ಮೆ ಎಲ್ಲರಿಗೂ ಶುಭವಾಗಲಿ, ಭಾರತೀಯ ಜನತಾ ಪಾರ್ಟಿ ಎಂಬ ಕುಟುಂಬದಲ್ಲಿ ಜೊತೆಯಾಗಿ ಸಾಗೋಣ ಎಂದು ಆಶಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಹಾಗೂ ಲಲ್ಲೇಶ್ ಕುಮಾರ್, ಹಾಗೂ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!