ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ನೂತನ ಶಕ್ತಿಕೇಂದ್ರದ ಪ್ರಮುಖರ ಸಭೆಯು ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ಅಟಲ್ ಸೇವಾ ಕೇಂದ್ರದಲ್ಲಿ ನಡೆಯಿತು
ಈ ವೇಳೆ ಮಾತನಾಡಿದ ಶಾಸಕರು, ಪಕ್ಷ ಸಂಘಟನಾತ್ಮಕ ನೆಲೆಯಲ್ಲಿ ಶಕ್ತಿಕೇಂದ್ರದ ಪ್ರಮುಖರಿಗೆ ಅತ್ಯಂತ ಹೆಚ್ಚಿನ ಜವಾಬ್ದಾರಿ ಇದೆ. ನಿಮ್ಮೆಲ್ಲರ ಸಾಮರ್ಥ್ಯ ಅರಿತೇ ಪಕ್ಷವು ಅಂತಹ ಜವಾಬ್ದಾರಿಯುತ ಸ್ಥಾನಕ್ಕೆ ಆಯ್ಕೆ ಮಾಡಿದ್ದು, ಅದಕ್ಕೆ ತಕ್ಕಂತೆ ಕಾರ್ಯ ನಿರ್ವಹಿಸುವ ಸಂಕಲ್ಪ ನಿಮ್ಮದಾಗಲಿ. ಹಿರಿಯ ಕಾರ್ಯಕರ್ತರಿಂದ ಸಲಹೆಗಳನ್ನು ಪಡೆದುಕೊಂಡು, ಕಿರಿಯ ಕಾರ್ಯಕರ್ತರನ್ನು ಜೋಡಿಸಿಕೊಂಡು ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ನಿಮ್ಮದು. ಮುಂಬರುವ ದಿನಗಳಲ್ಲಿ ಮಂಡಲ ಹಾಗೂ ಜಿಲ್ಲೆಯ ನೇತೃತ್ವದಲ್ಲಿ ಪಕ್ಷದ ಅನೇಕ ಚಟುವಟಿಕೆಗಳು ನಡೆಯಲಿದ್ದು, ಪ್ರತಿಯೊಂದು ಕಾರ್ಯಕ್ರಮದಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ, ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು, ಜನ ವಿರೋಧಿ ನೀತಿಗಳು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ನಿಮ್ಮ ಸಹಕಾರ ಅತ್ಯಗತ್ಯವಾಗಿದ್ದು, ಮತ್ತೊಮ್ಮೆ ಎಲ್ಲರಿಗೂ ಶುಭವಾಗಲಿ, ಭಾರತೀಯ ಜನತಾ ಪಾರ್ಟಿ ಎಂಬ ಕುಟುಂಬದಲ್ಲಿ ಜೊತೆಯಾಗಿ ಸಾಗೋಣ ಎಂದು ಆಶಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಹಾಗೂ ಲಲ್ಲೇಶ್ ಕುಮಾರ್, ಹಾಗೂ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…