ತಾಂತ್ರಿಕ ದೋಷದಿಂದ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಆವರಣ ಗೋಡೆಗೆ ಡಿಕ್ಕಿಯಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.
ವಿಟ್ಲ ಕೆ.ಎಸ್.ಆರ್.ಟಿ.ಸಿ.ನಿಲ್ದಾಣದ ಬಳಿ ಖಾಸಗಿ ಬಸ್ಸಿನ ಬ್ರೇಕ್ ವೈಫಲ್ಯದಿಂದ ರಸ್ತೆ ಬದಿಯ ಆವರಣಗೋಡೆಗೆ ಢಿಕ್ಕಿಯಾದ ಘಟನೆ ಶನಿವಾರ ಸಂಜೆ ವೇಳೆ ನಡೆದಿದೆ. ಅಪಘಾತದಲ್ಲಿ ಆವರಣಗೋಡೆ ಕುಸಿದುಬಿದ್ದಿದ್ದು, ಬಸ್ ಮುಂಭಾಗ ನಜ್ಜುಗುಜ್ಜಾಗಿದೆ. ಸುಮಾರು 17 ಕ್ಕೂ ಅಧಿಕ ಪ್ರಯಾಣಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಅಪಾಯ ಸಂಭವಿಸಿಲ್ಲವೆನ್ನಲಾಗಿದೆ.
ವಿಟ್ಲದಿಂದ ಕನ್ಯಾನಕ್ಕೆ ಬಸ್ ತೆರಳುವ ಸಂದರ್ಭ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ವಿಟ್ಲ ಎಸ್.ಐ.ರಾಮಕೃಷ್ಣ ಅವರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…