ಜನ ಮನದ ನಾಡಿ ಮಿಡಿತ

Advertisement

ಬ್ರಹ್ಮಾವರ: ಅಂತರ್‌ರಾಜ್ಯ ಕಳ್ಳ ಸಂತೋಷ್ ಹನುಮಂತ ಕಟ್ಟಿಮನಿ ಬಂಧನ

ಬೈಕಿನ ಸೈಡ್ ಬಾಕ್ಸ್ನಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಅಂತರ್ ರಾಜ್ಯ ಕಳ್ಳನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ 39ವರ್ಷದ ಸಂತೋಷ್ ಹನುಮಂತ ಕಟ್ಟಿಮನಿ ಬಂಧಿತ ಆರೋಪಿಯಾಗಿದ್ದಾರೆ. ಈತನಿಂದ ಕಳವು ಮಾಡಿದ 32,000 ರೂಪಾಯಿ ನಗದು ಹಾಗೂ ಮೊಬೈಲ್‌ನ್ನು ವಶಪಡಿಸಕೊಳ್ಳಲಾಗಿದೆ. ಸೊಸೈಟಿಯೊಂದರ ಪಿಗ್ಮಿ ಸಂಗ್ರಹಕರು ಆ.4ರಂದು ಸಂಜೆ ಬ್ರಹ್ಮಾವರ ಶಿವಳ್ಳಿ ಹೋಟೆಲ್ ಎದುರುಗಡೆ ಕರ್ನಾಟಕ ಬ್ಯಾಂಕ್ ಎಟಿಎಮ್ ಬಳಿ ಪಿಗ್ಮಿ ಕಲೆಕ್ಷನ್ ಮಾಡಿದ ನಗದನ್ನು ಬೈಕ್ ನ ಸೈಡ್ ಬಾಕ್ಸ್ನಲ್ಲಿ ಇಟ್ಟು ಬೀಗ ಹಾಕಿ ಹೋಟೆಲ್‌ಗೆ ಹೋಗಿ ಪಿಗ್ಮಿ ಕಲೆಕ್ಷನ್ ಮಾಡುತ್ತಿದ್ರು.

ಬಳಿಕ ವಾಪಾಸು ಬಂದು ನೋಡಿದಾಗ ಬೈಕ್‌ನ ಬಾಕ್ಸ್ನಲ್ಲಿ ಇಟ್ಟ ನಗದು ಹಣವು ಕಾಣದೇ ಇದ್ದು ಪರಿಶೀಲಿಸಿದಾಗ ಬಾಕ್ಸ್ನ ಬೀಗ ಒಡೆದು ಬಾಕ್ಸ್ನಲ್ಲಿದ್ದ ನಗದು ಹಣವನ್ನು ಮತ್ತು ಪಾನ್ ಕಾರ್ಡ್, ಆಧಾರ್ ಕಾರ್ಡ್ ಇತರೆ ದಾಖಲೆ ಪತ್ರವನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ಕಂಡುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

error: Content is protected !!