ಬೈಕಿನ ಸೈಡ್ ಬಾಕ್ಸ್ನಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಅಂತರ್ ರಾಜ್ಯ ಕಳ್ಳನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ 39ವರ್ಷದ ಸಂತೋಷ್ ಹನುಮಂತ ಕಟ್ಟಿಮನಿ ಬಂಧಿತ ಆರೋಪಿಯಾಗಿದ್ದಾರೆ. ಈತನಿಂದ ಕಳವು ಮಾಡಿದ 32,000 ರೂಪಾಯಿ ನಗದು ಹಾಗೂ ಮೊಬೈಲ್ನ್ನು ವಶಪಡಿಸಕೊಳ್ಳಲಾಗಿದೆ. ಸೊಸೈಟಿಯೊಂದರ ಪಿಗ್ಮಿ ಸಂಗ್ರಹಕರು ಆ.4ರಂದು ಸಂಜೆ ಬ್ರಹ್ಮಾವರ ಶಿವಳ್ಳಿ ಹೋಟೆಲ್ ಎದುರುಗಡೆ ಕರ್ನಾಟಕ ಬ್ಯಾಂಕ್ ಎಟಿಎಮ್ ಬಳಿ ಪಿಗ್ಮಿ ಕಲೆಕ್ಷನ್ ಮಾಡಿದ ನಗದನ್ನು ಬೈಕ್ ನ ಸೈಡ್ ಬಾಕ್ಸ್ನಲ್ಲಿ ಇಟ್ಟು ಬೀಗ ಹಾಕಿ ಹೋಟೆಲ್ಗೆ ಹೋಗಿ ಪಿಗ್ಮಿ ಕಲೆಕ್ಷನ್ ಮಾಡುತ್ತಿದ್ರು.
ಬಳಿಕ ವಾಪಾಸು ಬಂದು ನೋಡಿದಾಗ ಬೈಕ್ನ ಬಾಕ್ಸ್ನಲ್ಲಿ ಇಟ್ಟ ನಗದು ಹಣವು ಕಾಣದೇ ಇದ್ದು ಪರಿಶೀಲಿಸಿದಾಗ ಬಾಕ್ಸ್ನ ಬೀಗ ಒಡೆದು ಬಾಕ್ಸ್ನಲ್ಲಿದ್ದ ನಗದು ಹಣವನ್ನು ಮತ್ತು ಪಾನ್ ಕಾರ್ಡ್, ಆಧಾರ್ ಕಾರ್ಡ್ ಇತರೆ ದಾಖಲೆ ಪತ್ರವನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ಕಂಡುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…