ಜನ ಮನದ ನಾಡಿ ಮಿಡಿತ

Advertisement

ಕೊಟ್ಟಿಗೆ ಚಿರತೆಗಳು ನುಗ್ಗಿದ್ದು, ಸಿಕ್ಕ ಸಿಕ್ಕ ಕುರಿಗಳ ಮೇಲೆ ದಾಳಿ

ಕೊಟ್ಟಿಗೆ ಚಿರತೆಗಳು ನುಗ್ಗಿದ್ದು, ಸಿಕ್ಕ ಸಿಕ್ಕ ಕುರಿಗಳ ಮೇಲೆ ದಾಳಿ ಮಾಡಿವೆ. ಪರಿಣಾಮ 30ಕ್ಕೂ ಹೆಚ್ಚು ಕುರಿಗಳ ಮಾರಣಹೋಮವಾಗಿದೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಸಿರಿಗೆರೆ ಕ್ರಾಸ್ ಬಳಿ ಈ ಘಟನೆ ನಡೆದಿದೆ. ದಿಳ್ಳೆಪ್ಪ ಎಂಬ ರೈತನ ಅಡಿಕೆ ತೋಟದಲ್ಲಿ ಕುರಿಗಳ ಹಟ್ಟಿ ಹಾಕಿಕೊಂಡಿದ್ರು. ಆದ್ರೆ, ತಡರಾತ್ರಿ ಭರ್ಜರಿ ಮಳೆ ಬಂದ ಹಿನ್ನೆಲೆ ಕುರಿಗಳನ್ನ ಅಲ್ಲಿಯೇ ಬಿಟ್ಟು ಬೆಳಗಾವಿ ಮೂಲದ ಕುರಿಗಾಯಿಗಳು ಎತ್ತರದ ಸ್ಥಳಕ್ಕೆ ಹೋಗಿದ್ದಾರೆ. ಈ ವೇಳೆ ಎರಡ್ಮೂರು ಚಿರತೆಗಳು ಕೊಟ್ಟಿಗೆ ನುಗ್ಗಿದ್ದು, ಸಿಕ್ಕ ಸಿಕ್ಕ ಕುರಿಗಳ ಮೇಲೆ ದಾಳಿ ಮಾಡಿವೆ.

ಕುರಿಗಳನ್ನು ಅರ್ಧಂಬರ್ಧ ಕಚ್ಚಿ ತಿಂದು ಪರಾರಿಯಾಗಿವೆ. ಇದರಿಂದ 30ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದು, ಕುರಿಗಾಯಿಗಳು ಕಂಗಾಲಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ನಿವಾಸಿ ಸೋಮಣ್ಣ ಎಂಬವರಿಗೆ ಸೇರಿದ ಕುರಿಗಳು ಎಂದು ತಿಳಿದುಬಂದಿದೆ. ಇನ್ನು ವಿಷಯ ತಿಳಿದು ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸುತ್ತಲಿನ ಪ್ರದೇಶದಲ್ಲಿ ಎರಡರಿಂದ ಮೂರು ಚಿರತೆಗಳ ಸುತ್ತಾಟದ ಮಾಹಿತಿ ಇದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!