ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ನಗರಸಭಾ ವ್ಯಾಪ್ತಿಯ ಮುಕ್ಕಚ್ಚೇರಿ ಎಂಬಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜಯಕರ ಎಂಬುವವರ ವಾಸ್ತವ್ಯಮನೆ ಕುಸಿದು ಗೋಡೆ ಬಿರುಕು ಬಿಟ್ಟಿದ್ದು, ತೀವ್ರ ಹಾನಿಯಾಗಿದೆ. ಅಬ್ದುಲ್ ಖಾದರ್ ಅವರ ಮನೆ ಕಾಂಪೌಂಡ್ ಕೂಡಾ ಕುಸಿದು ಬಿದ್ದಿದೆ. ವಿಪರೀತ ಗಾಳಿ ಮಳೆಯಿಂದಾಗಿ ಕೆಲವು ಕಡೆ ಮರದ ಗೆಲ್ಲು ಬಿದ್ದು ವಿದ್ಯುತ್ ಸಂಪರ್ಕ ಕಡಿದಿದ್ದು, ಇದರಿಂದ ನಗರ ಸಭಾ ವ್ಯಾಪ್ತಿಯ ಪಟ್ಲ, ಗಂಡಿ, ಮುಡಿಪೋಡಿ ಮುಂತಾದ ಕಡೆಗಳಲ್ಲಿ ವಿದ್ಯುತ್ ಇಲ್ಲದೇ ಕಳೆದೆರಡು ದಿನಗಳಿಂದ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿದು ಬಂದಿದೆ. ವಿಪರೀತ ಮಳೆಗೆ ಗಂಡಿ, ಪಟ್ಲ ಸಹಿತ ಕೆಲವು ಕಡೆ ವಿದ್ಯುತ್ ಕಡಿತಗೊಂಡಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…