ಮಯೂರ ಪ್ರತಿಷ್ಠಾನ ಮಂಗಳೂರು ಇದರ ಪ್ರಥಮ ವಾರ್ಷಿಕೋತ್ಸವ ಹಾಗೂ ಯಕ್ಷ ಗುರು ರಕ್ಷಿತ್ ಪಡ್ರೆ ಶಿಷ್ಯವೃಂದದ ನೂತನ ಯಕ್ಷವೇಷಭೂಷಣ ಉದ್ಘಾಟನಾ ಕಾರ್ಯಕ್ರಮ ಮಯೂರಯಾನ-1 ಕಟೀಲು ರಥಬೀದಿ ಶ್ರೀ ಸರಸ್ವತಿ ಸದನದಲ್ಲಿ ಆ.9ರಂದು ನಡೆಯಲಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಅರ್ಚಕ ಹರಿದಾಸ ಆಸ್ರಣ್ಣ ಅವರು ನೂತನ ವೇಷಭೂಷಣವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿರುವರು. ಹಿರಿಯ ನ್ಯಾಯವಾದಿ, ಮಯೂರ ಪ್ರತಿಷ್ಠಾನದ ಅಧ್ಯಕ್ಷ ಪಿ.ಸದಾಶಿವ ಐತಾಳ ಅವರು ಅಧ್ಯಕ್ಷತೆ ವಹಿಸಲಿರುವರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹ ನಿರ್ದೇಶಕ ರಾಜೇಶ್ ಕೆ., ಪಣಂಬೂರು ಪಿ.ವಿ.ಐತಾಳ ಇಂಗ್ಲೀಷ್ ಯಕ್ಷಗಾನ ಬಳಗದ ಸಂಚಾಲಕ ಪಿ.ಸಂತೋಷ್ ಐತಾಳ, ನಿಡ್ಡೋಡಿ ಜ್ಞಾನರತ್ನ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭಾಸ್ಕರ ದೇವಸ್ಯ, ಮಂಗಳೂರು ಯಕ್ಷ ಮಂಜೂಷ ನಿರ್ದೇಶಕಿ ವಿದ್ಯಾ ಕೂಳ್ಯೂರು ಅತಿಥಿಗಳಾಗಿ ಭಾಗವಹಿಸಿಲಿರುವರು.
ಸಂಜೆ ಗಂಟೆ 4.30ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದ್ದು, 5.30ರ ವರೆಗೆ ಪೂರ್ವ ರಂಗ, ಬಳಿಕ ಸಭಾ ಕಾರ್ಯಕ್ರಮ, ಗಂಟೆ 7ರಿಂದ ಮಯೂರ ಪ್ರತಿಷ್ಠಾನ ಕಲಾವಿದರಿಂದ ಯಕ್ಷಗಾನ ಬಯಲಾಟ ಅಶ್ವಮೇಧ ಪ್ರದರ್ಶನ ನಡೆಯಲಿದೆ ಎಂದು ಪ್ರತಿಷ್ಠಾನ ಅಧ್ಯಕ್ಷ ಕೆ.ಸದಾಶಿವ ಐತಾಳ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…