ಮಯೂರ ಪ್ರತಿಷ್ಠಾನ ಮಂಗಳೂರು ಇದರ ಪ್ರಥಮ ವಾರ್ಷಿಕೋತ್ಸವ ಹಾಗೂ ಯಕ್ಷ ಗುರು ರಕ್ಷಿತ್ ಪಡ್ರೆ ಶಿಷ್ಯವೃಂದದ ನೂತನ ಯಕ್ಷವೇಷಭೂಷಣ ಉದ್ಘಾಟನಾ ಕಾರ್ಯಕ್ರಮ ಮಯೂರಯಾನ-1 ಕಟೀಲು ರಥಬೀದಿ ಶ್ರೀ ಸರಸ್ವತಿ ಸದನದಲ್ಲಿ ಆ.9ರಂದು ನಡೆಯಲಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಅರ್ಚಕ ಹರಿದಾಸ ಆಸ್ರಣ್ಣ ಅವರು ನೂತನ ವೇಷಭೂಷಣವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿರುವರು. ಹಿರಿಯ ನ್ಯಾಯವಾದಿ, ಮಯೂರ ಪ್ರತಿಷ್ಠಾನದ ಅಧ್ಯಕ್ಷ ಪಿ.ಸದಾಶಿವ ಐತಾಳ ಅವರು ಅಧ್ಯಕ್ಷತೆ ವಹಿಸಲಿರುವರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹ ನಿರ್ದೇಶಕ ರಾಜೇಶ್ ಕೆ., ಪಣಂಬೂರು ಪಿ.ವಿ.ಐತಾಳ ಇಂಗ್ಲೀಷ್ ಯಕ್ಷಗಾನ ಬಳಗದ ಸಂಚಾಲಕ ಪಿ.ಸಂತೋಷ್ ಐತಾಳ, ನಿಡ್ಡೋಡಿ ಜ್ಞಾನರತ್ನ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭಾಸ್ಕರ ದೇವಸ್ಯ, ಮಂಗಳೂರು ಯಕ್ಷ ಮಂಜೂಷ ನಿರ್ದೇಶಕಿ ವಿದ್ಯಾ ಕೂಳ್ಯೂರು ಅತಿಥಿಗಳಾಗಿ ಭಾಗವಹಿಸಿಲಿರುವರು.
ಸಂಜೆ ಗಂಟೆ 4.30ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದ್ದು, 5.30ರ ವರೆಗೆ ಪೂರ್ವ ರಂಗ, ಬಳಿಕ ಸಭಾ ಕಾರ್ಯಕ್ರಮ, ಗಂಟೆ 7ರಿಂದ ಮಯೂರ ಪ್ರತಿಷ್ಠಾನ ಕಲಾವಿದರಿಂದ ಯಕ್ಷಗಾನ ಬಯಲಾಟ ಅಶ್ವಮೇಧ ಪ್ರದರ್ಶನ ನಡೆಯಲಿದೆ ಎಂದು ಪ್ರತಿಷ್ಠಾನ ಅಧ್ಯಕ್ಷ ಕೆ.ಸದಾಶಿವ ಐತಾಳ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…