ಜನ ಮನದ ನಾಡಿ ಮಿಡಿತ

Advertisement

ಪಾಣೆಮಂಗಳೂರು: ದ್ವಿಚಕ್ರ ವಾಹನಕ್ಕೆ ಕೆ.ಎನ್.ಆರ್.ಸಿ.ಕಂಪೆನಿಯ ಲಾರಿ ಢಿ..#ಕ್ಕಿ…!!

ರಾಷ್ಟ್ರೀಯ ಹೆದ್ದಾರಿ 75ರ ಪಾಣೆಮಂಗಳೂರು ಸಮೀಪದ ನೆಹರುನಗರ ಎಂಬಲ್ಲಿ ಘನಗಾತ್ರದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ದ್ವಿಚಕ್ರವಾಹನ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಈತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲ್ಲಡ್ಕ ನಿವಾಸಿ ಸುಶಾಂತ್ ಕುಮಾರ್ ಎಂಬಾತನಿಗೆ ಲಾರಿ ಡಿಕ್ಕಿಯಾಗಿದೆ. ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಕೆ.ಎನ್.ಆರ್.ಸಿ. ಕಂಪೆನಿಗೆ ಸೇರಿದ ಲಾರಿ ಇದಾಗಿದ್ದು, ಚಾಲಕ ಅಬ್ದುಲ್ ನೂರ್ ಖಾಜಿ ಎಂಬಾತ ನೆಹರುನಗರದಲ್ಲಿರುವ ಅನಧಿಕೃತ ಕ್ರಾಸ್‌ನಲ್ಲಿ ಬಂದಿದ್ದಲ್ಲದೆ ರಾಂಗ್ ಸೈಡ್‌ನಲ್ಲಿ ಚಲಾಯಿಸಿಕೊಂಡು ದುಡುಕುತನ ಹಾಗೂ ನಿರ್ಲಕ್ಷ್ಯತನದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ ಎಂದು ದೂರಲಾಗಿದೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭವಾದ ಬಳಿಕ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿಯ ಲಾರಿಗಳ ಅವತಾರಕ್ಕೆ ಬಲಿಯಾದವರ ಸಂಖ್ಯೆ ಒಂದೆರೆಡಲ್ಲ.

ಕೈ ಕಾಲು ಕಳೆದುಕೊಂಡವರು ಅನೇಕರು. ಆದರೂ ಕಂಪೆನಿಯು ಲಾರಿಗಳ ಚಾಲಕರಿಗೆ ಕಿವಿಹಿಂಡುವ ಕಾರ್ಯ ಮಾಡಿದಂತಿಲ್ಲ, ಪೋಲೀಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮ ಆಗಿದ್ದೇ ಆದರೆ ಅನೇಕ ಪ್ರಯಾಣಿಕರ ಜೀವ ಉಳಿಯುತ್ತಿತ್ತು. ಇನ್ನು ಕಾಮಗಾರಿ ಮುಗಿಯುವವರೆಗೆ ಇನ್ನೆಷ್ಟು ಅಮಾಯಕ ಜೀವಗಳನ್ನು ಇವರ ರೌದ್ರನರ್ತನಕ್ಕೆ ಬಲಿತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ. ಆದರೆ ಕಂಪೆನಿಗಾಗಲಿ ಅಥವಾ ಇವರ ಕಾರ್ಮಿಕರಿಗಾಗಲಿ ಇನ್ನೊಂದು ಜೀವದ ಬೆಲೆ ಗೊತ್ತಿಲ್ಲವೆಂಬಂತೆ ಭಾಸವಾಗುತ್ತಿದೆ. ಹಾಗಾಗಿ ಮತ್ತೆ ಮತ್ತೆ ಇವರ ನಿರ್ಲಕ್ಷ್ಯತನಕ್ಕೆ ವಾಹನ ಸವಾರರು ಬಲಿಯಾಗುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!