ರಾಷ್ಟ್ರೀಯ ಹೆದ್ದಾರಿ 75ರ ಪಾಣೆಮಂಗಳೂರು ಸಮೀಪದ ನೆಹರುನಗರ ಎಂಬಲ್ಲಿ ಘನಗಾತ್ರದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ದ್ವಿಚಕ್ರವಾಹನ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಈತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲ್ಲಡ್ಕ ನಿವಾಸಿ ಸುಶಾಂತ್ ಕುಮಾರ್ ಎಂಬಾತನಿಗೆ ಲಾರಿ ಡಿಕ್ಕಿಯಾಗಿದೆ. ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಕೆ.ಎನ್.ಆರ್.ಸಿ. ಕಂಪೆನಿಗೆ ಸೇರಿದ ಲಾರಿ ಇದಾಗಿದ್ದು, ಚಾಲಕ ಅಬ್ದುಲ್ ನೂರ್ ಖಾಜಿ ಎಂಬಾತ ನೆಹರುನಗರದಲ್ಲಿರುವ ಅನಧಿಕೃತ ಕ್ರಾಸ್ನಲ್ಲಿ ಬಂದಿದ್ದಲ್ಲದೆ ರಾಂಗ್ ಸೈಡ್ನಲ್ಲಿ ಚಲಾಯಿಸಿಕೊಂಡು ದುಡುಕುತನ ಹಾಗೂ ನಿರ್ಲಕ್ಷ್ಯತನದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ ಎಂದು ದೂರಲಾಗಿದೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭವಾದ ಬಳಿಕ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿಯ ಲಾರಿಗಳ ಅವತಾರಕ್ಕೆ ಬಲಿಯಾದವರ ಸಂಖ್ಯೆ ಒಂದೆರೆಡಲ್ಲ.
ಕೈ ಕಾಲು ಕಳೆದುಕೊಂಡವರು ಅನೇಕರು. ಆದರೂ ಕಂಪೆನಿಯು ಲಾರಿಗಳ ಚಾಲಕರಿಗೆ ಕಿವಿಹಿಂಡುವ ಕಾರ್ಯ ಮಾಡಿದಂತಿಲ್ಲ, ಪೋಲೀಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮ ಆಗಿದ್ದೇ ಆದರೆ ಅನೇಕ ಪ್ರಯಾಣಿಕರ ಜೀವ ಉಳಿಯುತ್ತಿತ್ತು. ಇನ್ನು ಕಾಮಗಾರಿ ಮುಗಿಯುವವರೆಗೆ ಇನ್ನೆಷ್ಟು ಅಮಾಯಕ ಜೀವಗಳನ್ನು ಇವರ ರೌದ್ರನರ್ತನಕ್ಕೆ ಬಲಿತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ. ಆದರೆ ಕಂಪೆನಿಗಾಗಲಿ ಅಥವಾ ಇವರ ಕಾರ್ಮಿಕರಿಗಾಗಲಿ ಇನ್ನೊಂದು ಜೀವದ ಬೆಲೆ ಗೊತ್ತಿಲ್ಲವೆಂಬಂತೆ ಭಾಸವಾಗುತ್ತಿದೆ. ಹಾಗಾಗಿ ಮತ್ತೆ ಮತ್ತೆ ಇವರ ನಿರ್ಲಕ್ಷ್ಯತನಕ್ಕೆ ವಾಹನ ಸವಾರರು ಬಲಿಯಾಗುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…