ಜೀಪು ಪಲ್ಟಿಯಾಗಿ ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ಸಂಭವಿಸಿದೆ.
ಬಿಳಿನೆಲೆ ಗ್ರಾಮದ ಬಿಳಿನೆಲೆ ಬೈಲು ನಿವಾಸಿ 68ವರ್ಷದ ಧರ್ಮಪಾಲ ಮೃತಪಟ್ಟಿದ್ದಾರೆ. ಧರ್ಮಪಾಲ ಅವರು ತನ್ನ ಮಗನೊಂದಿಗೆ ತೋಟಕ್ಕೆ ಔಷಧಿ ಸಿಂಪಡಿಸಿದ ಬಳಿಕ ತಮ್ಮ ಜೀಪಿನಲ್ಲಿ ಮನೆಗೆ ಹಿಂದಿರುಗುವ ವೇಳೆ ಮನೆ ಸಮೀಪ ಮಣ್ಣಿನ ರಸ್ತೆಯಲ್ಲಿ ಜೀಪು ಹತ್ತದೇ ಇದ್ದುದರಿಂದ ಧರ್ಮಪಾಲ ಅವರು ಜೀಪಿನಿಂದ ಇಳಿದು ರಸ್ತೆ ಬದಿ ನಿಂತಿದ್ದ ವೇಳೆ, ಜೀಪು ಚಲಾಯಿಸುತ್ತಿದ್ದ ಧರ್ಮಪಾಲರ ಮಗ ಜೀಪನ್ನು ಹತ್ತಿಸಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಜೀಪು ಒಮ್ಮೆಲೇ ಹಿಮ್ಮುಖ ಚಲಿಸಿ ರಸ್ತೆ ಬದಿ ನಿಂತಿದ್ದ ಧರ್ಮಪಾಲರ ಮೇಲೆ ಬಿದ್ದಿದೆ.
ಘಟನೆಯಿಂದ ತೀವ್ರ ಗಾಯಗೊಂಡ ಧರ್ಮಪಾಲ ಅವರು ಆಸ್ಪತ್ರೆಗೆ ದಾಖಲಿಸುವ ಮೊದಲೇ ಮೃತಪಟ್ಟಿದ್ದಾರೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…