ಮಂಗಳೂರು: ಕೊಡಗು ಜಿಲ್ಲೆಯ ವೀರಾಜಪೇಟೆ ಜೈನರ ಬೀದಿಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಬಸವೇಶ್ವರ ದೇವಸ್ಥಾನದ ಹೊಸ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ ವಕೀಲ ಹಾಗು ಕರ್ನಾಟಕ ಹೈಕೋರ್ಟ್ ಹಿರಿಯ ವಕೀಲ ಎನ್. ರವೀಂದ್ರನಾಥ್ ಕಾಮತ್ ಅವರು ಆಯ್ಕೆಯಾಗಿದ್ದಾರೆ. ದೇವಸ್ಥಾನದ ಆವರಣದಲ್ಲಿ ಆಯ್ಕೆ ಸಭೆ ನಭೆಯಿತು.
ಮಾಜಿ ಅಧ್ಯಕ್ಷ ಎನ್. ಗೋಪಾಲಕೃಷ್ಣ ಕಾಮತ್ ಅವರ ನಿಧನದಿಂದ ಈ ಸ್ಥಾನ ತೆರವಾಗಿತ್ತು. ಉಪಾಧ್ಯಕ್ಷರಾಗಿ ಜೆ.ಎನ್.ಪುಷ್ಪರಾಜ್, ಪ್ರಧಾನ ಕಾರ್ಯದರ್ಶಿಯಾಗಿ ಎನ್. ನರೇಂದ್ರ ಕಾಮತ್, ಜಂಟಿ ಕಾರ್ಯದರ್ಶಿಯಾಗಿ ವಿ.ಎಂ.ಪುರುಷೋತ್ತಮ್, ಖಜಾಂಚಿಯಾಗಿ ಮಾಳೇಟಿರ ಸಾಬ ಮುತ್ತಪ್ಪ ಆಯ್ಕೆಯಾದರು.
ಕೆ.ಜಿ.ಅರುಣಕುಮಾರ್, ಸುಮಂತ ಜೈನ್, ಎ.ಕೆ.ರವಿಶಂಕರ, ಬಿ. ಎ. ಅಂಬಿ ಕೃಷ್ಣಮೂರ್ತಿ, ಡಾ.ಎನ್. ವೀರೇಂದ್ರ ಕಾಮತ್, ಕುಪ್ಪಂಡ ರಾಜೀವ್ ಕಾರ್ಯಪ್ಪ, ಎನ್. ವೆಂಕಟೇಶ ಕಾಮತ್, ಜೆ.ಪಿ.ಅರುಣ್ , ಜೆ. ವಿ.ಪ್ರಕಾಶ್, ಪಟ್ಟಡ ವಿಕ್ರಂ, ಕಂಡ್ರತಂಡ ಟಿ.ಮುತ್ತಣ್ಣ, ಮನೆಯಪಂಡ ರಿನ್ ಕಾಳಪ್ಪ, ಗಂಗಾಧರಯ್ಯ, ಡಾ. ಬಿ.ಪಿ. ಕೇಶವ ರಾವ್, ಪಿ.ಜಿ.ಅಯ್ಯಪ್ಪ, ದಿಲೀಪ್ ಕುಮಾರ್ ಜೈನ್, ಪ್ರವೀಣ್ ಕುಮಾರ್ ಜೈನ್ ಅವರು ಸದಸ್ಯರಾಗಿ ಆಯ್ಕೆಯಾದರು.
ದೇವಾಲಯದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಮೋಹನ್ ಭಟ್ ಅವರನ್ನು ಆಗಸ್ಟ್ 26ರಿಂದ ಸೆಪ್ಟೆಂಬರ್ 6ರವರೆಗೆ ಜರಗುವ ಗಣೇಶೋತ್ಸವದ ಪ್ರಧಾನ ಅರ್ಚಕರಾಗಿ ಕಾರ್ಯ ನಿರ್ವಹಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…