ಮಂಗಳೂರು: ಕೊಡಗು ಜಿಲ್ಲೆಯ ವೀರಾಜಪೇಟೆ ಜೈನರ ಬೀದಿಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಬಸವೇಶ್ವರ ದೇವಸ್ಥಾನದ ಹೊಸ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ ವಕೀಲ ಹಾಗು ಕರ್ನಾಟಕ ಹೈಕೋರ್ಟ್ ಹಿರಿಯ ವಕೀಲ ಎನ್. ರವೀಂದ್ರನಾಥ್ ಕಾಮತ್ ಅವರು ಆಯ್ಕೆಯಾಗಿದ್ದಾರೆ. ದೇವಸ್ಥಾನದ ಆವರಣದಲ್ಲಿ ಆಯ್ಕೆ ಸಭೆ ನಭೆಯಿತು.
ಮಾಜಿ ಅಧ್ಯಕ್ಷ ಎನ್. ಗೋಪಾಲಕೃಷ್ಣ ಕಾಮತ್ ಅವರ ನಿಧನದಿಂದ ಈ ಸ್ಥಾನ ತೆರವಾಗಿತ್ತು. ಉಪಾಧ್ಯಕ್ಷರಾಗಿ ಜೆ.ಎನ್.ಪುಷ್ಪರಾಜ್, ಪ್ರಧಾನ ಕಾರ್ಯದರ್ಶಿಯಾಗಿ ಎನ್. ನರೇಂದ್ರ ಕಾಮತ್, ಜಂಟಿ ಕಾರ್ಯದರ್ಶಿಯಾಗಿ ವಿ.ಎಂ.ಪುರುಷೋತ್ತಮ್, ಖಜಾಂಚಿಯಾಗಿ ಮಾಳೇಟಿರ ಸಾಬ ಮುತ್ತಪ್ಪ ಆಯ್ಕೆಯಾದರು.
ಕೆ.ಜಿ.ಅರುಣಕುಮಾರ್, ಸುಮಂತ ಜೈನ್, ಎ.ಕೆ.ರವಿಶಂಕರ, ಬಿ. ಎ. ಅಂಬಿ ಕೃಷ್ಣಮೂರ್ತಿ, ಡಾ.ಎನ್. ವೀರೇಂದ್ರ ಕಾಮತ್, ಕುಪ್ಪಂಡ ರಾಜೀವ್ ಕಾರ್ಯಪ್ಪ, ಎನ್. ವೆಂಕಟೇಶ ಕಾಮತ್, ಜೆ.ಪಿ.ಅರುಣ್ , ಜೆ. ವಿ.ಪ್ರಕಾಶ್, ಪಟ್ಟಡ ವಿಕ್ರಂ, ಕಂಡ್ರತಂಡ ಟಿ.ಮುತ್ತಣ್ಣ, ಮನೆಯಪಂಡ ರಿನ್ ಕಾಳಪ್ಪ, ಗಂಗಾಧರಯ್ಯ, ಡಾ. ಬಿ.ಪಿ. ಕೇಶವ ರಾವ್, ಪಿ.ಜಿ.ಅಯ್ಯಪ್ಪ, ದಿಲೀಪ್ ಕುಮಾರ್ ಜೈನ್, ಪ್ರವೀಣ್ ಕುಮಾರ್ ಜೈನ್ ಅವರು ಸದಸ್ಯರಾಗಿ ಆಯ್ಕೆಯಾದರು.
ದೇವಾಲಯದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಮೋಹನ್ ಭಟ್ ಅವರನ್ನು ಆಗಸ್ಟ್ 26ರಿಂದ ಸೆಪ್ಟೆಂಬರ್ 6ರವರೆಗೆ ಜರಗುವ ಗಣೇಶೋತ್ಸವದ ಪ್ರಧಾನ ಅರ್ಚಕರಾಗಿ ಕಾರ್ಯ ನಿರ್ವಹಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…