ಮಂಗಳೂರು: ಕೊಡಗು ಜಿಲ್ಲೆಯ ವೀರಾಜಪೇಟೆ ಜೈನರ ಬೀದಿಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಬಸವೇಶ್ವರ ದೇವಸ್ಥಾನದ ಹೊಸ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ ವಕೀಲ ಹಾಗು ಕರ್ನಾಟಕ ಹೈಕೋರ್ಟ್ ಹಿರಿಯ ವಕೀಲ ಎನ್. ರವೀಂದ್ರನಾಥ್ ಕಾಮತ್ ಅವರು ಆಯ್ಕೆಯಾಗಿದ್ದಾರೆ. ದೇವಸ್ಥಾನದ ಆವರಣದಲ್ಲಿ ಆಯ್ಕೆ ಸಭೆ ನಭೆಯಿತು.
ಮಾಜಿ ಅಧ್ಯಕ್ಷ ಎನ್. ಗೋಪಾಲಕೃಷ್ಣ ಕಾಮತ್ ಅವರ ನಿಧನದಿಂದ ಈ ಸ್ಥಾನ ತೆರವಾಗಿತ್ತು. ಉಪಾಧ್ಯಕ್ಷರಾಗಿ ಜೆ.ಎನ್.ಪುಷ್ಪರಾಜ್, ಪ್ರಧಾನ ಕಾರ್ಯದರ್ಶಿಯಾಗಿ ಎನ್. ನರೇಂದ್ರ ಕಾಮತ್, ಜಂಟಿ ಕಾರ್ಯದರ್ಶಿಯಾಗಿ ವಿ.ಎಂ.ಪುರುಷೋತ್ತಮ್, ಖಜಾಂಚಿಯಾಗಿ ಮಾಳೇಟಿರ ಸಾಬ ಮುತ್ತಪ್ಪ ಆಯ್ಕೆಯಾದರು.
ಕೆ.ಜಿ.ಅರುಣಕುಮಾರ್, ಸುಮಂತ ಜೈನ್, ಎ.ಕೆ.ರವಿಶಂಕರ, ಬಿ. ಎ. ಅಂಬಿ ಕೃಷ್ಣಮೂರ್ತಿ, ಡಾ.ಎನ್. ವೀರೇಂದ್ರ ಕಾಮತ್, ಕುಪ್ಪಂಡ ರಾಜೀವ್ ಕಾರ್ಯಪ್ಪ, ಎನ್. ವೆಂಕಟೇಶ ಕಾಮತ್, ಜೆ.ಪಿ.ಅರುಣ್ , ಜೆ. ವಿ.ಪ್ರಕಾಶ್, ಪಟ್ಟಡ ವಿಕ್ರಂ, ಕಂಡ್ರತಂಡ ಟಿ.ಮುತ್ತಣ್ಣ, ಮನೆಯಪಂಡ ರಿನ್ ಕಾಳಪ್ಪ, ಗಂಗಾಧರಯ್ಯ, ಡಾ. ಬಿ.ಪಿ. ಕೇಶವ ರಾವ್, ಪಿ.ಜಿ.ಅಯ್ಯಪ್ಪ, ದಿಲೀಪ್ ಕುಮಾರ್ ಜೈನ್, ಪ್ರವೀಣ್ ಕುಮಾರ್ ಜೈನ್ ಅವರು ಸದಸ್ಯರಾಗಿ ಆಯ್ಕೆಯಾದರು.
ದೇವಾಲಯದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಮೋಹನ್ ಭಟ್ ಅವರನ್ನು ಆಗಸ್ಟ್ 26ರಿಂದ ಸೆಪ್ಟೆಂಬರ್ 6ರವರೆಗೆ ಜರಗುವ ಗಣೇಶೋತ್ಸವದ ಪ್ರಧಾನ ಅರ್ಚಕರಾಗಿ ಕಾರ್ಯ ನಿರ್ವಹಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…