ಬೀದಿ ನಾಯಿಯನ್ನು ರಕ್ಷಿಸಲು ಹೋಗಿ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಸ್ಕೂಟಿಯಲ್ಲಿದ್ದ ಮೂವರು ಶಾಲಾ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ. ರಾಂಪುರ ನಗರದ ದೆಹಲಿ-ನೈನಿತಾಲ್ ರಾಷ್ಟ್ರೀಯ ಹೆದ್ದಾರಿ-87ರಲ್ಲಿ ಸೋಮವಾರ ಈ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಸೈಯದ್ ಜಯಾನ್, ಮೊಹಮ್ಮದ್ ಅಹದ್ ಮತ್ತು ಮೊಹಮ್ಮದ್ ಉಮೈರ್ ಎಂದು ಗುರುತಿಸಲಾಗಿದೆ.
ತಲೆಗೆ ತೀವ್ರವಾದ ಪೆಟ್ಟು ಬಿದ್ದು ಅತಿಯಾದ ರಕ್ತಸ್ರಾವದಿಂದ ಮೂವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಈ ನಿಟ್ಟಿನಲ್ಲಿ ರಾಮ್ಪುರ ಎಎಸ್ಪಿ ಸಂಸಾರ್ ಸಿಂಗ್ ಅವರು ತಮ್ಮ ಮಕ್ಕಳಿಗೆ ವಾಹನಗಳನ್ನು ನೀಡುವಾಗ ಪೋಷಕರು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಇಂತಹ ಘಟನೆಗಳು ನಡೆಯುತ್ತವೆ ಎಂದು ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…