ಬಂಟ್ವಾಳ ಡಿ.ವೈ.ಎಸ್.ಪಿ.ಕಚೇರಿಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಜಗನ್ನಾಥ ಶೆಟ್ಟಿ ಅವರು ಸಹಾಯಕ ನಿರೀಕ್ಷಕರಾಗಿ ಮುಂಬಡ್ತಿ ಹೊಂದಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
1997 ರಲ್ಲಿ ಪೋಲೀಸ್ ಇಲಾಖೆಗೆ ಸೇರಿದ ಇವರು ಜಿಲ್ಲೆಯ ವಿವಿಧ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. 1998 ರಲ್ಲಿ ಬಂಟ್ವಾಳ ಪೋಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾದ ಬಳಿಕ ಮಂಗಳೂರು ರೌಡಿ ನಿಗ್ರಹ ದಳದಲ್ಲಿ ಸೇವೆ, ಬಂಟ್ವಾಳ ವೃತ್ತ ನಿರೀಕ್ಷಕರ ಕಚೇರಿ, ಉಪ್ಪಿನಂಗಡಿ ಪೋಲೀಸ್ ಠಾಣೆ, ಬಂಟ್ವಾಳ ಗ್ರಾಮಾಂತರ, ಪುಂಜಾಲಕಟ್ಟೆ, ಮಂಗಳೂರು ಹೆಚ್ಚುವರಿ ಪೋಲೀಸ್ ಅಧೀಕ್ಷಕರ ಕಚೇರಿ, ಐಎಸ್ಡಿ ಬಂಟ್ವಾಳ ಹೀಗೆ ಇಷ್ಟು ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಬಳಿಕ ಹೆಚ್.ಸಿ.ಯಾಗಿ ಮುಂಬಡ್ತಿ ಹೊಂದಿದ ಇವರು ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಗೆ ವರ್ಗಾವಣೆಯಾದರು, ಬಳಿಕ ಅರಣ್ಯಸಂಚಾರಿ ಇಲಾಖೆ ಮಂಗಳೂರು, ಎಸ್. ಪಿ.ಕಚೇರಿಯ ವಿಶೇಷ ವಿಭಾಗ, ಬಂಟ್ವಾಳ ನಗರ ಪೋಲೀಸ್ ಠಾಣೆ, ಇದೀಗ ಡಿ.ವೈಎಸ್.ಪಿ.ಕಚೇರಿಯಿಂದ ಎಎಸ್ಐಯಾಗಿ ಮುಂಬಡ್ತಿಯಾಗಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…